<p><strong>ಹೊದಿಗೆರೆ (ಚನ್ನಗಿರಿ):</strong> ‘ಹಿಂದೂ ಸಾಮ್ರಾಜ್ಯ ಹಾಗೂ ಧರ್ಮದ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಆಳುವ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಇದುವರೆಗೂ ಅಭಿವೃದ್ಧಿ ಕಂಡಿಲ್ಲ’ ಎಂದು ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಾಜೀ ರಾಜೇ ಭೋಂಸ್ಲೆ ಸಮಾಧಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.</p>.<p>‘ಪುರಾತತ್ವ ಇಲಾಖೆ ಸ್ಮಾರಕಗಳ ಅಭಿವೃದ್ಧಿಗೆ ಮುಂದೆ ಬರುವುದಿಲ್ಲ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾದರೆ ಅಡ್ಡಿ ಪಡಿಸುತ್ತದೆ. ಇಲ್ಲಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹ 5 ಕೋಟಿ ಅನುದಾನವನ್ನು ಸಚಿವ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿದರೂ ಅನೇಕ ಕಾರಣಗಳನ್ನು ಮುಂದಿಟ್ಟು ಇಲಾಖೆ ಅಡ್ಡಗಾಲು ಹಾಕುತ್ತಿದೆ’ ಎಂದು ದೂರಿದರು.</p>.<p>‘ಪುರಾತತ್ವ ಇಲಾಖೆಯ ನೀತಿಯಿಂದಾಗಿ ರಾಜ್ಯದಲ್ಲಿ ಅನೇಕ ಸ್ಮಾರಕಗಳು ಪಾಳು ಬೀಳುವಂತಾಗಿವೆ. ಸಂಸದರು ಈ ಸ್ಥಳದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಬೇಕು. ಹಿಂದೂ ಧರ್ಮದ ಪ್ರಮುಖ ಸ್ಮಾರಕಗಳ ಅಭಿವೃದ್ಧಿಗೆ ಕೇಂದ್ರ ಪುರಾತತ್ವ ಇಲಾಖೆ ಅಡ್ಡಪಡಿಸಬಾರದು. ನಾವೆಲ್ಲಾ ಒಂದಾಗಿ ಐತಿಹಾಸಿಕ ಸ್ಮಾರಕಗಳ ಉಳಿವಿಗಾಗಿ ಹೋರಾಟ ಮಾಡಬೇಕಾಗಿದೆ’ ಎಂದರು.</p>.<p>ಕ್ಷತ್ರಿಯ ಮರಾಠ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ಶಿವಾಜಿರಾವ್ ಶಿಂಧೆ, ವಿಎಚ್ಪಿ ಮುಖಂಡರಾದ ಎನ್. ರವಿಚಂದ್ರ, ಮಂಜುನಾಥ್ ಕಾಳೆ, ಮಂಜುನಾಥ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-43-692345774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊದಿಗೆರೆ (ಚನ್ನಗಿರಿ):</strong> ‘ಹಿಂದೂ ಸಾಮ್ರಾಜ್ಯ ಹಾಗೂ ಧರ್ಮದ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಆಳುವ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಇದುವರೆಗೂ ಅಭಿವೃದ್ಧಿ ಕಂಡಿಲ್ಲ’ ಎಂದು ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಾಜೀ ರಾಜೇ ಭೋಂಸ್ಲೆ ಸಮಾಧಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.</p>.<p>‘ಪುರಾತತ್ವ ಇಲಾಖೆ ಸ್ಮಾರಕಗಳ ಅಭಿವೃದ್ಧಿಗೆ ಮುಂದೆ ಬರುವುದಿಲ್ಲ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾದರೆ ಅಡ್ಡಿ ಪಡಿಸುತ್ತದೆ. ಇಲ್ಲಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹ 5 ಕೋಟಿ ಅನುದಾನವನ್ನು ಸಚಿವ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿದರೂ ಅನೇಕ ಕಾರಣಗಳನ್ನು ಮುಂದಿಟ್ಟು ಇಲಾಖೆ ಅಡ್ಡಗಾಲು ಹಾಕುತ್ತಿದೆ’ ಎಂದು ದೂರಿದರು.</p>.<p>‘ಪುರಾತತ್ವ ಇಲಾಖೆಯ ನೀತಿಯಿಂದಾಗಿ ರಾಜ್ಯದಲ್ಲಿ ಅನೇಕ ಸ್ಮಾರಕಗಳು ಪಾಳು ಬೀಳುವಂತಾಗಿವೆ. ಸಂಸದರು ಈ ಸ್ಥಳದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಬೇಕು. ಹಿಂದೂ ಧರ್ಮದ ಪ್ರಮುಖ ಸ್ಮಾರಕಗಳ ಅಭಿವೃದ್ಧಿಗೆ ಕೇಂದ್ರ ಪುರಾತತ್ವ ಇಲಾಖೆ ಅಡ್ಡಪಡಿಸಬಾರದು. ನಾವೆಲ್ಲಾ ಒಂದಾಗಿ ಐತಿಹಾಸಿಕ ಸ್ಮಾರಕಗಳ ಉಳಿವಿಗಾಗಿ ಹೋರಾಟ ಮಾಡಬೇಕಾಗಿದೆ’ ಎಂದರು.</p>.<p>ಕ್ಷತ್ರಿಯ ಮರಾಠ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ಶಿವಾಜಿರಾವ್ ಶಿಂಧೆ, ವಿಎಚ್ಪಿ ಮುಖಂಡರಾದ ಎನ್. ರವಿಚಂದ್ರ, ಮಂಜುನಾಥ್ ಕಾಳೆ, ಮಂಜುನಾಥ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-43-692345774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>