ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮನೂರುಗೆ ಗೌರವ ಡಾಕ್ಟರೇಟ್ ಪ್ರದಾನ

Last Updated 12 ಸೆಪ್ಟೆಂಬರ್ 2021, 3:54 IST
ಅಕ್ಷರ ಗಾತ್ರ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಶಾಸಕ, ಶಾಮನೂರು ಶಿವಶಂಕರಪ್ಪ ಅವರಿಗೆ ಕಲಬುರ್ಗಿ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರ ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿತು.

ಶಾಮನೂರು ಶಿವಶಂಕರಪ್ಪನವರ ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಕುಲಾಧಿಪತಿ ಶರಣಬಸವಪ್ಪ ಅಪ್ಪಾ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಸುಪ್ರೀಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ, ವಿಧಾನ ಪರಿಷತ್ ಸದಸ್ಯ
ಬಿ.ಜಿ. ಪಾಟೀಲ, ರಾಜಶೇಖರ ಶಿವಾಚಾರ್ಯ, ಉದ್ಯಮಿ ಲಿಂಗರಾಜ ಎಸ್. ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

ದಾಕ್ಷಾಯಿಣಿ ಶರಣಬಸವಪ್ಪ ಅಪ್ಪಾ, ಕೇಂದ್ರ ಸಚಿವ ಭಗವಂತ ಖೂಬಾ, ದಾವಣಗೆರೆ
ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ವಿ.ಹಲಸೆ, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ
ಡಾ. ದಯಾನಂದ
ಅರಸರ, ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ನಿರಂಜನ್ ವಿ. ನಿಷ್ಟಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT