ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾಮದಾರ ಅಧಿಕಾರದಲ್ಲಿ ಇದ್ದಾಗ ಯಾರಿಗೂ ಸಹಾಯ ಮಾಡಲಿಲ್ಲ ಎಂದು ಶಾಮನೂರು ಹೇಳಿದ್ದಾರೆ. ಜಾಮದಾರ ಮಾಡಿರುವ ಕೆಲಸ ಏನು ಎಂಬುದು ಸಮುದಾಯದವರಿಗೆ ಗೊತ್ತಿದೆ. ಲಿಂಗಾಯತ ಧರ್ಮದ ಬಗ್ಗೆ ಹಲವು ಮೌಲಿಕ ಅಧ್ಯಯನ ನಡೆಸಿದ್ದಾರೆ. ಅವರು ಪುರಾವೆ ಇಟ್ಟುಕೊಂಡೇ ಮಾತನಾಡುತ್ತಾರೆ. ಅವರು ಈಚೆಗೆ ‘ಅಖಿಲ ಭಾರತ ವೀರಶೈವ ಮಹಾಸಭಾ ಈ ಸತ್ಯಗಳನ್ನು ಅರ್ಥಮಾಡಿಕೊಳ್ಳುವುದೇ’ ಎಂಬ ಪುಸ್ತಕ ಬರೆದಿದ್ದಾರೆ. ಅದರಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದನ್ನು ಸಹಿಸದೇ ಶಾಮನೂರು ಶಿವಶಂಕರಪ್ಪ ಅವರು ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳ ಮೂಲಕ ಶಾಮನೂರು ಸಮಾಜದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.