<p><strong>ದಾವಣಗೆರೆ:</strong> ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ಅವರಂತಹ ವ್ಯಕ್ತಿ ಸಿಗುವುದು ಅಪರೂಪ ಎಂದು ಅನ್ನದಾನೀಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಅಭಿಪ್ರಾಯಪಟ್ಟರು.</p>.<p>ನಗರದ ದೇವರಾಜ ಅರಸು ಬಡಾವಣೆಯ ಹಾಲಕೆರೆ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿವಶಂಕರಪ್ಪ ಅವರೊಂದಿಗಿನ ಒಡನಾಟ ಅಪಾರ ಅನುಭವ ನೀಡಿದೆ. ದಾವಣಗೆರೆಯ ಅನ್ವರ್ಥ ನಾಮದಂತೆ ಬದುಕಿದ್ದ ಅವರು ನಗರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದರು. ಅವರನ್ನು ಕಳೆದುಕೊಂಡು ಶೂನ್ಯ ಅವರಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪುರುವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ‘ಶಿವಶಂಕರಪ್ಪ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಂಚಪೀಠಗಳನ್ನು ಒಗ್ಗೂಡಿಸಲು ಸಮಾವೇಶ ಆಯೋಜಿಸಿದ್ದರು. ಭಕ್ತರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದರು’ ಎಂದರು.</p>.<p>ಅನ್ನದಾನೀಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ಕಾರ್ಯದರ್ಶಿ ಎನ್. ಅಡಿವೆಪ್ಪ, ಪದಾಧಿಕಾರಿಗಳಾದ ವೈ.ಬಿ. ಸತೀಶ್, ಅಮರಯ್ಯ ಗುರುವಿನ ಮಠ, ಎನ್.ಎ. ಗಿರೀಶ್, ಎಸ್.ಜಿ. ಉಳವಯ್ಯ, ಶಿವಪುತ್ರಪ್ಪ ಶಿಂಗಾಡಿ, ನರೇಂದ್ರ ಪ್ರಕಾಶ್, ಎಸ್. ಓಂಕಾರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ಅವರಂತಹ ವ್ಯಕ್ತಿ ಸಿಗುವುದು ಅಪರೂಪ ಎಂದು ಅನ್ನದಾನೀಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ಅಧ್ಯಕ್ಷ ಅಥಣಿ ವೀರಣ್ಣ ಅಭಿಪ್ರಾಯಪಟ್ಟರು.</p>.<p>ನಗರದ ದೇವರಾಜ ಅರಸು ಬಡಾವಣೆಯ ಹಾಲಕೆರೆ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗೆ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿವಶಂಕರಪ್ಪ ಅವರೊಂದಿಗಿನ ಒಡನಾಟ ಅಪಾರ ಅನುಭವ ನೀಡಿದೆ. ದಾವಣಗೆರೆಯ ಅನ್ವರ್ಥ ನಾಮದಂತೆ ಬದುಕಿದ್ದ ಅವರು ನಗರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದರು. ಅವರನ್ನು ಕಳೆದುಕೊಂಡು ಶೂನ್ಯ ಅವರಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪುರುವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ‘ಶಿವಶಂಕರಪ್ಪ ಅವರು ಸಾಮಾಜಿಕ, ಧಾರ್ಮಿಕ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಂಚಪೀಠಗಳನ್ನು ಒಗ್ಗೂಡಿಸಲು ಸಮಾವೇಶ ಆಯೋಜಿಸಿದ್ದರು. ಭಕ್ತರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದರು’ ಎಂದರು.</p>.<p>ಅನ್ನದಾನೀಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ಕಾರ್ಯದರ್ಶಿ ಎನ್. ಅಡಿವೆಪ್ಪ, ಪದಾಧಿಕಾರಿಗಳಾದ ವೈ.ಬಿ. ಸತೀಶ್, ಅಮರಯ್ಯ ಗುರುವಿನ ಮಠ, ಎನ್.ಎ. ಗಿರೀಶ್, ಎಸ್.ಜಿ. ಉಳವಯ್ಯ, ಶಿವಪುತ್ರಪ್ಪ ಶಿಂಗಾಡಿ, ನರೇಂದ್ರ ಪ್ರಕಾಶ್, ಎಸ್. ಓಂಕಾರಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>