<p><strong>ದಾವಣಗೆರೆ</strong>: ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 1.30ರ ವೇಳೆಗೆ ಇಲ್ಲಿನ ಹೈಸ್ಕೂಲ್ ಮೈದಾನಕ್ಕೆ ತರಲಾಯಿತು. ಬೆಳಿಗ್ಗೆ 10 ಗಂಟೆಯಿಂದಲೇ ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಜನರು ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. </p>.<p>ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಸ್ಥಳದಲ್ಲಿದ್ದು, ಸಿದ್ಧತೆಗಳನ್ನು ಕೈಗೊಂಡಿದ್ದರು. ಬೃಹತ್ ಪೆಂಡಾಲ್ ಅಳವಡಿಸಿ, ಅಂತಿಮ ದರ್ಶನಕ್ಕೆ ಬರುವ ಗಣ್ಯರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. </p>.<p>ಜಾತಿ, ಧರ್ಮಗಳ ಬೇಧವಿಲ್ಲದೇ ಎಲ್ಲಾ ಸಮುದಾಯಗಳ ಜನರೂ ‘ದಾವಣಗೆರೆ ಧಣಿ’ಗೆ ಅಂತಿಮ ನಮನ ಸಲ್ಲಿಸಿದರು. ಯುವಕರಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯೋಮಾನದವರೂ ಸಾಲಿನಲ್ಲಿ ನಿಂತು ದರ್ಶನ ಪಡೆದರು.</p>.<p>ಯುವಜನತೆಯು ಪಾರ್ಥಿವ ಶರೀರದ ಬಳಿ ಬಂದಾಗ ವಿಡಿಯೊ, ಫೋಟೊ ತೆಗೆಸಿಕೊಂಡು ಪ್ರೀತಿಯ ‘ಅಜ್ಜ’ನನ್ನು ನೆನೆದು ಭಾವುಕರಾದರು. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜನರು ಶಾಮನೂರು ಶಿವಶಂಕರಪ್ಪ ಅವರು ಚಾಚಿದ್ದ ಸಹಾಯಹಸ್ತದ ಬಗ್ಗೆ ನೆನಪಿಸಿಕೊಂಡರು.</p>.<p>ಬ್ಯಾರಿಕೇಡ್ ಕಾರಣಕ್ಕೆ ತೀರಾ ಹತ್ತಿರಕ್ಕೆ ಹೋಗಲು ಸಾಧ್ಯವಾಗದ್ದರಿಂದ ಜನರು ಹೂವಿನ ಹಾರಗಳನ್ನು ಪಾರ್ಥಿವ ಶರೀರಕ್ಕೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಮುಖಂಡರಿಗೆ ಒಪ್ಪಿಸಿದರು. ಸುಮಾರು 1 ಗಂಟೆಯಷ್ಟು ಹೊತ್ತು ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಆ ಬಳಿಕ ಮಧ್ಯಾಹ್ನ 2.40ರ ವೇಳೆಗೆ ಅಂತಿಮ ಶವಯಾತ್ರೆಯನ್ನು ಆರಂಭಿಸಲಾಯಿತು. ಮೆರವಣಿಗೆ ವೇಳೆ ‘ಓಂ ನಮಃ ಶಿವಾಯ’ ಘೋಷಣೆ ಮೊಳಗಿದವು.</p>.<p><strong>ಅನ್ನ ಸಂತರ್ಪಣೆ: </strong></p>.<p>ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಸಾರ್ವಜನಿಕರಿಗೆ ಶಾಮನೂರು ಶಿವಶಂಕರಪ್ಪ ಅವರ ಬೆಂಬಲಿಗರು, ಅಭಿಮಾನಿಗಳಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಹೈಸ್ಕೂಲ್ ಮೈದಾನ ಹಾಗೂ ಶಿವಶಂಕರಪ್ಪ ನಿವಾಸದ ಬಳಿ ಸಾರ್ವಜನಿಕರಿಗೆ ಆಹಾರ ಪೊಟ್ಟಣ ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. </p>.<p>ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ಬಿ.ದೇವೇಂದ್ರಪ್ಪ, ಕೆ.ಎಸ್.ಬಸವಂತಪ್ಪ, ಎನ್.ವೈ.ಗೋಪಾಲಕೃಷ್ಣ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್, ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಮಾಧುಸ್ವಾಮಿ, ಎಸ್.ಎಸ್. ಪಾಟೀಲ್, ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಮಹಾಸಭಾದ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್, ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಮಾಜಿ ಸಂಸದ ಆರ್.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ನಟಿ ಅದಿತಿ ಪ್ರಭುದೇವ, ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್. ರಮೇಶ್ ಅಂತಿಮ ದರ್ಶನ ಪಡೆದರು.</p>.<p><strong>ಎರಡೂವರೆ ಸಾವಿರ ಪೊಲೀಸರು </strong></p><p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಅಂತ್ಯಕ್ರಿಯೆಗೆ ಹಲವು ಗಣ್ಯರು ಆಗಮಿಸಿದ ಕಾರಣಕ್ಕೆ ನಗರದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ಅಂದಾಜು 2500 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ನಿವಾಸ ಹೈಸ್ಕೂಲ್ ಮೈದಾನ ಹಾಗೂ ಕಲ್ಲೇಶ್ವರ ರೈಸ್ ಆವರಣ ಸೇರಿದಂತೆ ಪ್ರಮುಖ ವೃತ್ತಗಳು ಮೆರವಣಿಗೆ ಸಾಗಿದ ರಸ್ತೆಯುದ್ದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಜಿಲ್ಲೆ ಮಾತ್ರವಲ್ಲದೇ ಚಿತ್ರದುರ್ಗ ಶಿವಮೊಗ್ಗ ಹಾವೇರಿ ಬಳ್ಳಾರಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಎಸ್ಪಿಗಳು ಎಎಸ್ಪಿಗಳು ಇನ್ಸ್ಪೆಕ್ಟರ್ಗಳು ಸಬ್ ಇನ್ಸ್ಪೆಕ್ಟರ್ಗಳು ಸೇರಿದಂತೆ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಕೇಂದ್ರ ವಲಯ ಐಜಿಪಿ ಲಾಬೂ ರಾಮ್ ಪೂರ್ವ ವಲಯ ಐಜಿಪಿ ಬಿ.ಆರ್. ರವಿಕಾಂತೇಗೌಡ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತೆಯ ಮೇಲುಸ್ತುವಾರಿ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಿಧನರಾದ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 1.30ರ ವೇಳೆಗೆ ಇಲ್ಲಿನ ಹೈಸ್ಕೂಲ್ ಮೈದಾನಕ್ಕೆ ತರಲಾಯಿತು. ಬೆಳಿಗ್ಗೆ 10 ಗಂಟೆಯಿಂದಲೇ ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಜನರು ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕೆ ಮುಗಿಬಿದ್ದರು. </p>.<p>ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್, ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಸ್ಥಳದಲ್ಲಿದ್ದು, ಸಿದ್ಧತೆಗಳನ್ನು ಕೈಗೊಂಡಿದ್ದರು. ಬೃಹತ್ ಪೆಂಡಾಲ್ ಅಳವಡಿಸಿ, ಅಂತಿಮ ದರ್ಶನಕ್ಕೆ ಬರುವ ಗಣ್ಯರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. </p>.<p>ಜಾತಿ, ಧರ್ಮಗಳ ಬೇಧವಿಲ್ಲದೇ ಎಲ್ಲಾ ಸಮುದಾಯಗಳ ಜನರೂ ‘ದಾವಣಗೆರೆ ಧಣಿ’ಗೆ ಅಂತಿಮ ನಮನ ಸಲ್ಲಿಸಿದರು. ಯುವಕರಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯೋಮಾನದವರೂ ಸಾಲಿನಲ್ಲಿ ನಿಂತು ದರ್ಶನ ಪಡೆದರು.</p>.<p>ಯುವಜನತೆಯು ಪಾರ್ಥಿವ ಶರೀರದ ಬಳಿ ಬಂದಾಗ ವಿಡಿಯೊ, ಫೋಟೊ ತೆಗೆಸಿಕೊಂಡು ಪ್ರೀತಿಯ ‘ಅಜ್ಜ’ನನ್ನು ನೆನೆದು ಭಾವುಕರಾದರು. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜನರು ಶಾಮನೂರು ಶಿವಶಂಕರಪ್ಪ ಅವರು ಚಾಚಿದ್ದ ಸಹಾಯಹಸ್ತದ ಬಗ್ಗೆ ನೆನಪಿಸಿಕೊಂಡರು.</p>.<p>ಬ್ಯಾರಿಕೇಡ್ ಕಾರಣಕ್ಕೆ ತೀರಾ ಹತ್ತಿರಕ್ಕೆ ಹೋಗಲು ಸಾಧ್ಯವಾಗದ್ದರಿಂದ ಜನರು ಹೂವಿನ ಹಾರಗಳನ್ನು ಪಾರ್ಥಿವ ಶರೀರಕ್ಕೆ ಸಲ್ಲಿಸುವಂತೆ ಸ್ಥಳದಲ್ಲಿದ್ದ ಮುಖಂಡರಿಗೆ ಒಪ್ಪಿಸಿದರು. ಸುಮಾರು 1 ಗಂಟೆಯಷ್ಟು ಹೊತ್ತು ಪಾರ್ಥಿವ ಶರೀರವನ್ನು ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಆ ಬಳಿಕ ಮಧ್ಯಾಹ್ನ 2.40ರ ವೇಳೆಗೆ ಅಂತಿಮ ಶವಯಾತ್ರೆಯನ್ನು ಆರಂಭಿಸಲಾಯಿತು. ಮೆರವಣಿಗೆ ವೇಳೆ ‘ಓಂ ನಮಃ ಶಿವಾಯ’ ಘೋಷಣೆ ಮೊಳಗಿದವು.</p>.<p><strong>ಅನ್ನ ಸಂತರ್ಪಣೆ: </strong></p>.<p>ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಸಾರ್ವಜನಿಕರಿಗೆ ಶಾಮನೂರು ಶಿವಶಂಕರಪ್ಪ ಅವರ ಬೆಂಬಲಿಗರು, ಅಭಿಮಾನಿಗಳಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಹೈಸ್ಕೂಲ್ ಮೈದಾನ ಹಾಗೂ ಶಿವಶಂಕರಪ್ಪ ನಿವಾಸದ ಬಳಿ ಸಾರ್ವಜನಿಕರಿಗೆ ಆಹಾರ ಪೊಟ್ಟಣ ಹಾಗೂ ಕುಡಿಯುವ ನೀರಿನ ಬಾಟಲಿಗಳನ್ನು ವಿತರಿಸಲಾಯಿತು. </p>.<p>ಗದುಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ಬಿ.ದೇವೇಂದ್ರಪ್ಪ, ಕೆ.ಎಸ್.ಬಸವಂತಪ್ಪ, ಎನ್.ವೈ.ಗೋಪಾಲಕೃಷ್ಣ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್, ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಮಾಧುಸ್ವಾಮಿ, ಎಸ್.ಎಸ್. ಪಾಟೀಲ್, ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಮಹಾಸಭಾದ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್, ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಮಾಜಿ ಸಂಸದ ಆರ್.ಎಸ್. ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ನಟಿ ಅದಿತಿ ಪ್ರಭುದೇವ, ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್. ರಮೇಶ್ ಅಂತಿಮ ದರ್ಶನ ಪಡೆದರು.</p>.<p><strong>ಎರಡೂವರೆ ಸಾವಿರ ಪೊಲೀಸರು </strong></p><p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಅಂತ್ಯಕ್ರಿಯೆಗೆ ಹಲವು ಗಣ್ಯರು ಆಗಮಿಸಿದ ಕಾರಣಕ್ಕೆ ನಗರದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ಅಂದಾಜು 2500 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ನಿವಾಸ ಹೈಸ್ಕೂಲ್ ಮೈದಾನ ಹಾಗೂ ಕಲ್ಲೇಶ್ವರ ರೈಸ್ ಆವರಣ ಸೇರಿದಂತೆ ಪ್ರಮುಖ ವೃತ್ತಗಳು ಮೆರವಣಿಗೆ ಸಾಗಿದ ರಸ್ತೆಯುದ್ದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಜಿಲ್ಲೆ ಮಾತ್ರವಲ್ಲದೇ ಚಿತ್ರದುರ್ಗ ಶಿವಮೊಗ್ಗ ಹಾವೇರಿ ಬಳ್ಳಾರಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಎಸ್ಪಿಗಳು ಎಎಸ್ಪಿಗಳು ಇನ್ಸ್ಪೆಕ್ಟರ್ಗಳು ಸಬ್ ಇನ್ಸ್ಪೆಕ್ಟರ್ಗಳು ಸೇರಿದಂತೆ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಗರಕ್ಕೆ ಕರೆಸಿಕೊಳ್ಳಲಾಗಿತ್ತು. ಕೇಂದ್ರ ವಲಯ ಐಜಿಪಿ ಲಾಬೂ ರಾಮ್ ಪೂರ್ವ ವಲಯ ಐಜಿಪಿ ಬಿ.ಆರ್. ರವಿಕಾಂತೇಗೌಡ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತೆಯ ಮೇಲುಸ್ತುವಾರಿ ವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>