ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಅಂದ ಮೇಲೆ ಹಣ ಹಂಚುತ್ತಾರೆ: ಶಾಮನೂರು ಶಿವಶಂಕರಪ್ಪ

Last Updated 10 ಡಿಸೆಂಬರ್ 2021, 4:10 IST
ಅಕ್ಷರ ಗಾತ್ರ

ದಾವಣಗೆರೆ: ‘ಕಾಂಗ್ರೆಸ್‌, ಬಿಜೆಪಿ ಎಂದಲ್ಲ; ಚುನಾವಣೆ ಬಂದಾಗ ಎಲ್ಲರೂ ಹಣ ಹಂಚುತ್ತಾರೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ಹೆಲಿಕಾಪ್ಟರ್‌ ಪತನದಿಂದ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ವೇಳೆ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ಹಣ ಹಂಚಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಅವರೂ ಹಂಚಿದ್ದಾರೆ. ಇವರೂ ಹಂಚಿದ್ದಾರೆ. ಚುನಾವಣೆ ಅಂದಮೇಲೆ ಹಣದ ಮೇಲೆ ಅದು ನಿಂತಿರುತ್ತದೆ’ ಎಂದು ಹೇಳಿದರು.

‘ಬಿಜೆಪಿ–ಜೆಡಿಎಸ್‌ ಮೈತ್ರಿ ಬಗ್ಗೆ ಗೊತ್ತಿಲ್ಲ. ನಾವು ಯಾರನ್ನೂ ಬೆಂಬಲಿಸಿ ಎಂದು ಕೇಳಿಲ್ಲ. ಚಿತ್ರದುರ್ಗ ವಿಧಾನಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT