<p><strong>ಹರಿಹರ:</strong> ಗುಂಡಿಮಯವಾಗಿರುವ ನಗರದ ಹೊರವಲಯದ ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು 1.3 ಕಿ.ಮೀ. ವ್ಯಾಪ್ತಿವರೆಗೆ ದ್ವಿಪಥದ ಸಿಮೆಂಟ್ ಕಾಂಕ್ರೀಟ್ ರಸ್ತೆಯಾಗಿ (ಸಿಸಿ ರಸ್ತೆ) ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ.</p>.<p>ಪಿಡಬ್ಲ್ಯುಡಿ ಇಲಾಖೆಯ ಅಂಗಸಂಸ್ಥೆಯಾದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಿಂದ (ಎಸ್ಎಚ್ಡಿಪಿ) ಕಾಮಗಾರಿ ನಡೆಯಲಿದ್ದು, ₹ 10 ಕೋಟಿ ಮೊತ್ತಕ್ಕೆ ಟೆಂಡರ್ ಪ್ರಕ್ರಿಯೆ ಆಗಿದೆ. ಹೊರವಲಯದ ಎಲ್ಐಸಿ ಕಚೇರಿಯಿಂದ ಬೈಪಾಸ್ ಕಡೆಯ ಇಂಡಿಯನ್ ಫೌಂಡ್ರಿ ವರೆಗಿನ ಡಾಂಬರ್ ರಸ್ತೆಯ ಜಾಗದಲ್ಲಿ ಸುಸಜ್ಜಿತ ದ್ವಿಪಥದ ಸಿಸಿ ರಸ್ತೆ ನಿರ್ಮಾಣವಾಗಲಿದೆ.</p>.<p>ಕಾಮಗಾರಿಯ ಉದ್ದ 1.3 ಕಿ.ಮೀ. ಇರಲಿದೆ, ದ್ವಿಪಥದ ತಲಾ ಒಂದು ಬದಿಯಲ್ಲಿ 7.5 ಮೀ. ಅಗಲದ ರಸ್ತೆ, ಮಧ್ಯದಲ್ಲಿ 1.2 ಮೀ. ವಿಭಜಕ (ಮೀಡಿಯನ್), ಎರಡೂ ಬದಿ ತಲಾ 1.65 ಮೀ. ಅಗಲದ ಭುಜ (ಶೋಲ್ಡರ್) ನಿರ್ಮಿಸಲಾಗುವುದು.</p>.<p>‘ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಆದಷ್ಟು ಬೇಗ ಆರಂಭಿಸಿ, ಟೆಂಡರ್ನಲ್ಲಿ ನಿಗದಿ ಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ನಗರಕ್ಕೆ ಅಂಟಿಕೊಂಡಿರುವ ರಸ್ತೆಯಾಗಿರುವುದರಿಂದ ವಿಭಜಕದಲ್ಲಿ ಬೀದಿ ದೀಪಗಳ ವ್ಯವಸ್ಥೆಯೂ ಆಗಬೇಕು’ ಎಂದು ಸಾರ್ವಜನಿಕರ ಆಗ್ರಹ.</p>.<div><blockquote>ನಗರದ ಗಾಂಧಿ ವೃತ್ತದಿಂದ ಬೈಪಾಸ್ನ ಸಿದ್ಧವೀರಪ್ಪ ವೃತ್ತದವರೆಗಿನ 4 ಕಿ.ಮೀ. ರಸ್ತೆ ಗುಂಡಿಮಯವಾಗಿದ್ದು ಈ ಇಡೀ ರಸ್ತೆಯನ್ನು ಸಿಸಿ ರಸ್ತೆಯಾಗಿ ಅಭಿವೃದ್ಧಿ ಪಡಿಸಬೇಕಿತ್ತು </blockquote><span class="attribution">ನಾಗರಾಜ್ ಭಂಡಾರಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಉಪಾಧ್ಯಕ್ಷ</span></div>.<div><blockquote>ಮಳೆ ಇದ್ದುದ್ದರಿಂದ ಕಾಮಗಾರಿ ಆರಂಭಿಸಿಲ್ಲ. ಆದಷ್ಟು ಬೇಗ ಕಾಮಗಾರಿ ಆರಂಭಿಸುತ್ತೇವೆ </blockquote><span class="attribution">ಮರಿಸ್ವಾಮಿ ಎಚ್.ವಿ ಪಿಡಬ್ಲ್ಯುಡಿ ಎಇಇ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಗುಂಡಿಮಯವಾಗಿರುವ ನಗರದ ಹೊರವಲಯದ ಶಿವಮೊಗ್ಗ ರಾಜ್ಯ ಹೆದ್ದಾರಿಯನ್ನು 1.3 ಕಿ.ಮೀ. ವ್ಯಾಪ್ತಿವರೆಗೆ ದ್ವಿಪಥದ ಸಿಮೆಂಟ್ ಕಾಂಕ್ರೀಟ್ ರಸ್ತೆಯಾಗಿ (ಸಿಸಿ ರಸ್ತೆ) ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರವೇ ಕಾಮಗಾರಿ ಆರಂಭವಾಗಲಿದೆ.</p>.<p>ಪಿಡಬ್ಲ್ಯುಡಿ ಇಲಾಖೆಯ ಅಂಗಸಂಸ್ಥೆಯಾದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಿಂದ (ಎಸ್ಎಚ್ಡಿಪಿ) ಕಾಮಗಾರಿ ನಡೆಯಲಿದ್ದು, ₹ 10 ಕೋಟಿ ಮೊತ್ತಕ್ಕೆ ಟೆಂಡರ್ ಪ್ರಕ್ರಿಯೆ ಆಗಿದೆ. ಹೊರವಲಯದ ಎಲ್ಐಸಿ ಕಚೇರಿಯಿಂದ ಬೈಪಾಸ್ ಕಡೆಯ ಇಂಡಿಯನ್ ಫೌಂಡ್ರಿ ವರೆಗಿನ ಡಾಂಬರ್ ರಸ್ತೆಯ ಜಾಗದಲ್ಲಿ ಸುಸಜ್ಜಿತ ದ್ವಿಪಥದ ಸಿಸಿ ರಸ್ತೆ ನಿರ್ಮಾಣವಾಗಲಿದೆ.</p>.<p>ಕಾಮಗಾರಿಯ ಉದ್ದ 1.3 ಕಿ.ಮೀ. ಇರಲಿದೆ, ದ್ವಿಪಥದ ತಲಾ ಒಂದು ಬದಿಯಲ್ಲಿ 7.5 ಮೀ. ಅಗಲದ ರಸ್ತೆ, ಮಧ್ಯದಲ್ಲಿ 1.2 ಮೀ. ವಿಭಜಕ (ಮೀಡಿಯನ್), ಎರಡೂ ಬದಿ ತಲಾ 1.65 ಮೀ. ಅಗಲದ ಭುಜ (ಶೋಲ್ಡರ್) ನಿರ್ಮಿಸಲಾಗುವುದು.</p>.<p>‘ರಸ್ತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಆದಷ್ಟು ಬೇಗ ಆರಂಭಿಸಿ, ಟೆಂಡರ್ನಲ್ಲಿ ನಿಗದಿ ಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು. ನಗರಕ್ಕೆ ಅಂಟಿಕೊಂಡಿರುವ ರಸ್ತೆಯಾಗಿರುವುದರಿಂದ ವಿಭಜಕದಲ್ಲಿ ಬೀದಿ ದೀಪಗಳ ವ್ಯವಸ್ಥೆಯೂ ಆಗಬೇಕು’ ಎಂದು ಸಾರ್ವಜನಿಕರ ಆಗ್ರಹ.</p>.<div><blockquote>ನಗರದ ಗಾಂಧಿ ವೃತ್ತದಿಂದ ಬೈಪಾಸ್ನ ಸಿದ್ಧವೀರಪ್ಪ ವೃತ್ತದವರೆಗಿನ 4 ಕಿ.ಮೀ. ರಸ್ತೆ ಗುಂಡಿಮಯವಾಗಿದ್ದು ಈ ಇಡೀ ರಸ್ತೆಯನ್ನು ಸಿಸಿ ರಸ್ತೆಯಾಗಿ ಅಭಿವೃದ್ಧಿ ಪಡಿಸಬೇಕಿತ್ತು </blockquote><span class="attribution">ನಾಗರಾಜ್ ಭಂಡಾರಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಉಪಾಧ್ಯಕ್ಷ</span></div>.<div><blockquote>ಮಳೆ ಇದ್ದುದ್ದರಿಂದ ಕಾಮಗಾರಿ ಆರಂಭಿಸಿಲ್ಲ. ಆದಷ್ಟು ಬೇಗ ಕಾಮಗಾರಿ ಆರಂಭಿಸುತ್ತೇವೆ </blockquote><span class="attribution">ಮರಿಸ್ವಾಮಿ ಎಚ್.ವಿ ಪಿಡಬ್ಲ್ಯುಡಿ ಎಇಇ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>