‘ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆವು. ಇದರಿಂದ ಹೆಚ್ಚಿನ ಅನಾಹುತ ತಪ್ಪಿತು. ಹೋಟೆಲ್ ಒಳಗೆ ಸಂಪೂರ್ಣ ಸುಟ್ಟಿದೆ. ಹೋಟೆಲ್ಗೆ ರಜೆ ಇತ್ತು. ಹೀಗಾಗಿ ಯಾವುದೇ ಪ್ರಾಣಾಪಾಯ ಆಗಿಲ್ಲ.ರಜೆ ಇದ್ದ ಕಾರಣ ಹೋಟೆಲ್ ಮಾಲೀಕರು ಸಂಪರ್ಕಕ್ಕೆ ಸಿಗಲಿಲ್ಲ. ಎಷ್ಟು ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂಬ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ’ ಎಂದು ಅಗ್ನಿ ಶಾಮಕ ಅಧಿಕಾರಿ ಬಸವಪ್ರಭು ಶರ್ಮ ‘ಪ್ರಜಾವಾಣಿ’ಗೆ ತಿಳಿಸಿದರು.