<p><strong>ದಾವಣಗೆರೆ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ 2028ರವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ಅವಧಿಯನ್ನು ಅವರು ಪೂರ್ಣಗೊಳಿಸಲಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.</p>.<p>‘2028ರವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಬದಲಾವಣೆ ಮಾಡಬೇಕಾದರೆ ರಾಜ್ಯದಲ್ಲಿ ಯಾರಿಂದಲೂ ಸಾಧ್ಯವಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವ ಶಕ್ತಿ ಹೈಕಮಾಂಡ್ಗೆ ಮಾತ್ರ ಇದೆ. 50 ವರ್ಷ ರಾಜಕಾರಣದಲ್ಲಿ ಇರುವ ಸಿದ್ದರಾಮಯ್ಯ ನಿಜಕ್ಕೂ ಜನನಾಯಕ’ ಎಂದು ಜಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸಿದ್ದರಾಮಯ್ಯ ಅವರು 5 ವರ್ಷದ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಅರ್ಧಕ್ಕೆ ಕೆಳಗೆ ಇಳಿಯುತ್ತಾರೆ ಎಂಬುದು ಊಹಾಪೋಹ. ರಾಜ್ಯದ ಅತಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದು ಹಿಂದುಳಿದ ವರ್ಗಗಳಿಗೆ ಹೆಮ್ಮೆಯ ಸಂಗತಿ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.</p><p><strong>'ಟಿಕೆಟ್: ಮುಸ್ಲಿಮರ ಬೇಡಿಕೆ'</strong></p><p>'ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಮುಸ್ಲಿಂ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ' ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.</p><p>'ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುವುದು' ಎಂಬುದಾಗಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು 2023ರಲ್ಲಿ ನೀಡಿದ ಆಶ್ವಾಸನೆಯನ್ನು ಅನೇಕ ಮುಖಂಡರು ಗಮನಕ್ಕೆ ತಂದಿದ್ದಾರೆ. ಇದರ ವಿಡಿಯೊ ಕ್ಲಿಪ್ ಕೂಡ ತೋರಿಸಿದ್ದಾರೆ. ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p><strong>'ಟಿಕೆಟ್: ಮುಸ್ಲಿಮರ ಬೇಡಿಕೆ'</strong></p><p>'ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಮುಸ್ಲಿಂ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ' ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.</p><p>'ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುವುದು' ಎಂಬುದಾಗಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು 2023ರಲ್ಲಿ ನೀಡಿದ ಆಶ್ವಾಸನೆಯನ್ನು ಅನೇಕ ಮುಖಂಡರು ಗಮನಕ್ಕೆ ತಂದಿದ್ದಾರೆ. ಇದರ ವಿಡಿಯೊ ಕ್ಲಿಪ್ ಕೂಡ ತೋರಿಸಿದ್ದಾರೆ. ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ 2028ರವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ಅವಧಿಯನ್ನು ಅವರು ಪೂರ್ಣಗೊಳಿಸಲಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.</p>.<p>‘2028ರವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಬದಲಾವಣೆ ಮಾಡಬೇಕಾದರೆ ರಾಜ್ಯದಲ್ಲಿ ಯಾರಿಂದಲೂ ಸಾಧ್ಯವಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವ ಶಕ್ತಿ ಹೈಕಮಾಂಡ್ಗೆ ಮಾತ್ರ ಇದೆ. 50 ವರ್ಷ ರಾಜಕಾರಣದಲ್ಲಿ ಇರುವ ಸಿದ್ದರಾಮಯ್ಯ ನಿಜಕ್ಕೂ ಜನನಾಯಕ’ ಎಂದು ಜಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಸಿದ್ದರಾಮಯ್ಯ ಅವರು 5 ವರ್ಷದ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಅರ್ಧಕ್ಕೆ ಕೆಳಗೆ ಇಳಿಯುತ್ತಾರೆ ಎಂಬುದು ಊಹಾಪೋಹ. ರಾಜ್ಯದ ಅತಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದು ಹಿಂದುಳಿದ ವರ್ಗಗಳಿಗೆ ಹೆಮ್ಮೆಯ ಸಂಗತಿ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.</p><p><strong>'ಟಿಕೆಟ್: ಮುಸ್ಲಿಮರ ಬೇಡಿಕೆ'</strong></p><p>'ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಮುಸ್ಲಿಂ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ' ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.</p><p>'ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುವುದು' ಎಂಬುದಾಗಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು 2023ರಲ್ಲಿ ನೀಡಿದ ಆಶ್ವಾಸನೆಯನ್ನು ಅನೇಕ ಮುಖಂಡರು ಗಮನಕ್ಕೆ ತಂದಿದ್ದಾರೆ. ಇದರ ವಿಡಿಯೊ ಕ್ಲಿಪ್ ಕೂಡ ತೋರಿಸಿದ್ದಾರೆ. ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p><strong>'ಟಿಕೆಟ್: ಮುಸ್ಲಿಮರ ಬೇಡಿಕೆ'</strong></p><p>'ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಮುಸ್ಲಿಂ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ' ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.</p><p>'ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುವುದು' ಎಂಬುದಾಗಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು 2023ರಲ್ಲಿ ನೀಡಿದ ಆಶ್ವಾಸನೆಯನ್ನು ಅನೇಕ ಮುಖಂಡರು ಗಮನಕ್ಕೆ ತಂದಿದ್ದಾರೆ. ಇದರ ವಿಡಿಯೊ ಕ್ಲಿಪ್ ಕೂಡ ತೋರಿಸಿದ್ದಾರೆ. ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>