<p><strong>ದಾವಣಗೆರೆ:</strong> ‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಗುಂಡಿಯನ್ನು ಮುಚ್ಚಿಕೊಳ್ಳಲು ಹಾಸನದಲ್ಲಿ ಸಮಾವೇಶ ನಡೆಸಿದ್ದಾರೆ‘ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.</p><p>‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಕಾಲಾಹರಣ ಮಾಡುತ್ತಿದೆ. ಸರ್ಕಾರದ ವಿರುದ್ಧ ರಾಜ್ಯದ ಜನರು ಆಕ್ರೋಶಗೊಂಡಿದ್ದಾರೆ. ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಉಪಚುನಾವಣೆಯಲ್ಲಿ 3 ವಿಧಾನಸಭಾ ಕ್ಷೇತ್ರ ಗೆದ್ದಿರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ತೇಲಾಡುತ್ತಿದೆ. ಅಧಿಕಾರದಲ್ಲಿದ್ದಾಗ ಬಿಜೆಪಿ 18 ಕ್ಷೇತ್ರಗಳನ್ನು ಗೆದ್ದಿತ್ತು. ಜನಾಶೀರ್ವಾದವನ್ನು ನಾವು ಗೇಲಿ ಮಾಡುವುದಿಲ್ಲ. ಅಭಿವೃದ್ಧಿ ಕೆಲಸ ಮಾಡುವಂತೆ ಜನರು ಮತ ಹಾಕಿದ್ದಾರೆಯೇ ಹೊರತು ಭ್ರಷ್ಟಾಚಾರಕ್ಕೆ ಪರವಾನಗಿ ನೀಡಿಲ್ಲ’ ಎಂದು ಕುಟುಕಿದರು.</p><p>‘ಕೊನೆಯ ಚುನಾವಣೆ ಎಂಬ ಸುಳ್ಳು ಹೇಳಿ 2013ರಿಂದ ಮತದಾರರನ್ನು ಮೋಸಗೊಳಿಸಿದ್ದಾರೆ. ಸಿದ್ದರಾಮಯ್ಯ ಖಾತ್ರಿ ಇಲ್ಲದ ರಾತ್ರಿಯ ಮಾತುಗಳನ್ನು ಆಡುವುದರಲ್ಲಿ ನಿಪುಣರು. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದರು.</p><p>ಶಾಸಕ ವಿ.ಸುನಿಲ್ಕುಮಾರ್, ಮಾಜಿ ಸಚಿವರಾದ ಬಿ.ಸಿ.ಪಾಟೀಲ್, ಎಸ್.ಎ.ರವೀಂದ್ರನಾಥ್, ಮಾಜಿ ಸಂಸದ ಮುನಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಚಂದ್ರಶೇಖರ್ ಪೂಜಾರಿ, ಧನಂಜಯ್ ಕಡ್ಲೇಬಾಳು, ಮಾಡಾಳ್ ಮಲ್ಲಿಕಾರ್ಜುನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಗುಂಡಿಯನ್ನು ಮುಚ್ಚಿಕೊಳ್ಳಲು ಹಾಸನದಲ್ಲಿ ಸಮಾವೇಶ ನಡೆಸಿದ್ದಾರೆ‘ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.</p><p>‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿ ಹೆಸರಿನಲ್ಲಿ ಸರ್ಕಾರ ಕಾಲಾಹರಣ ಮಾಡುತ್ತಿದೆ. ಸರ್ಕಾರದ ವಿರುದ್ಧ ರಾಜ್ಯದ ಜನರು ಆಕ್ರೋಶಗೊಂಡಿದ್ದಾರೆ. ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಉಪಚುನಾವಣೆಯಲ್ಲಿ 3 ವಿಧಾನಸಭಾ ಕ್ಷೇತ್ರ ಗೆದ್ದಿರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ತೇಲಾಡುತ್ತಿದೆ. ಅಧಿಕಾರದಲ್ಲಿದ್ದಾಗ ಬಿಜೆಪಿ 18 ಕ್ಷೇತ್ರಗಳನ್ನು ಗೆದ್ದಿತ್ತು. ಜನಾಶೀರ್ವಾದವನ್ನು ನಾವು ಗೇಲಿ ಮಾಡುವುದಿಲ್ಲ. ಅಭಿವೃದ್ಧಿ ಕೆಲಸ ಮಾಡುವಂತೆ ಜನರು ಮತ ಹಾಕಿದ್ದಾರೆಯೇ ಹೊರತು ಭ್ರಷ್ಟಾಚಾರಕ್ಕೆ ಪರವಾನಗಿ ನೀಡಿಲ್ಲ’ ಎಂದು ಕುಟುಕಿದರು.</p><p>‘ಕೊನೆಯ ಚುನಾವಣೆ ಎಂಬ ಸುಳ್ಳು ಹೇಳಿ 2013ರಿಂದ ಮತದಾರರನ್ನು ಮೋಸಗೊಳಿಸಿದ್ದಾರೆ. ಸಿದ್ದರಾಮಯ್ಯ ಖಾತ್ರಿ ಇಲ್ಲದ ರಾತ್ರಿಯ ಮಾತುಗಳನ್ನು ಆಡುವುದರಲ್ಲಿ ನಿಪುಣರು. ಸಿದ್ದರಾಮಯ್ಯ ರಾಜಕೀಯದಲ್ಲಿ ಇರುವವರೆಗೂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದರು.</p><p>ಶಾಸಕ ವಿ.ಸುನಿಲ್ಕುಮಾರ್, ಮಾಜಿ ಸಚಿವರಾದ ಬಿ.ಸಿ.ಪಾಟೀಲ್, ಎಸ್.ಎ.ರವೀಂದ್ರನಾಥ್, ಮಾಜಿ ಸಂಸದ ಮುನಿಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಶಿವಯೋಗಿಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮುಖಂಡರಾದ ಚಂದ್ರಶೇಖರ್ ಪೂಜಾರಿ, ಧನಂಜಯ್ ಕಡ್ಲೇಬಾಳು, ಮಾಡಾಳ್ ಮಲ್ಲಿಕಾರ್ಜುನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>