<p><strong>ಹೊನ್ನಾಳಿ</strong>: ‘ಜಿ.ಬಿ.ವಿನಯಕುಮಾರ್ ಅವರಿಗೆ ಬಿಜೆಪಿಯವರು ಕರೆತಂದು ದುಡ್ಡುಕೊಟ್ಟು ಚುನಾವಣೆಗೆ ನಿಲ್ಲಿಸಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಶಾಮನೂರು ಕುಟುಂಬದವರದ್ದು, ಅದನ್ನು ಅವರು ಸಿಎಂ ಬಾಯಿಯಲ್ಲಿ ಹೇಳಿಸಿದ್ದಾರೆ’ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೇಳಿದರು. </p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ದುಡ್ಡು ಮಾಡಲು ಚುನಾವಣೆಗೆ ನಿಂತಿಲ್ಲ, ನಾನು ಸ್ವಾಭಿಮಾನದ ಹೋರಾಟವನ್ನು ಕೈಗೆತ್ತಿಕೊಂಡಿದ್ದು, ಜನಶಕ್ತಿಯನ್ನು ನಂಬಿದ್ದೇನೆ’ ಎಂದು ಹೇಳಿದರು.</p>.<p>‘ನಾನು ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಂದಿದ್ದೇನೆ. ದಾವಣಗೆರೆಯ ಎರಡೂ ಕುಟುಂಬಗಳ ದೌರ್ಬಲ್ಯವನ್ನು ಗುರುತಿಸಿದ್ದೇನೆ. ಕ್ಷೇತ್ರದಲ್ಲಿ ನನ್ನ ಪರ ಅಲೆ ಇದೆ. ನಾನು ಗೆಲ್ಲುತ್ತೇನೆ ಎಂದು ತಿಳಿದು ಈ ರೀತಿಯ ಆರೋಪವನ್ನು ಸಿದ್ದರಾಮಯ್ಯ ಕಡೆಯಿಂದ ಮಾಡಿಸಿದ್ದಾರೆ’ ಎಂದು ಅವರು ದೂರಿದರು. </p>.<p>ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲಿದ್ದೇನೆ ಎಂದರು. ನೂರಾರು ಜನ ಬೆಂಬಲಿಗರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಜಿ.ಬಿ.ವಿನಯಕುಮಾರ್ ಅವರಿಗೆ ಬಿಜೆಪಿಯವರು ಕರೆತಂದು ದುಡ್ಡುಕೊಟ್ಟು ಚುನಾವಣೆಗೆ ನಿಲ್ಲಿಸಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಶಾಮನೂರು ಕುಟುಂಬದವರದ್ದು, ಅದನ್ನು ಅವರು ಸಿಎಂ ಬಾಯಿಯಲ್ಲಿ ಹೇಳಿಸಿದ್ದಾರೆ’ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೇಳಿದರು. </p>.<p>ಸೋಮವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾನು ದುಡ್ಡು ಮಾಡಲು ಚುನಾವಣೆಗೆ ನಿಂತಿಲ್ಲ, ನಾನು ಸ್ವಾಭಿಮಾನದ ಹೋರಾಟವನ್ನು ಕೈಗೆತ್ತಿಕೊಂಡಿದ್ದು, ಜನಶಕ್ತಿಯನ್ನು ನಂಬಿದ್ದೇನೆ’ ಎಂದು ಹೇಳಿದರು.</p>.<p>‘ನಾನು ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಂದಿದ್ದೇನೆ. ದಾವಣಗೆರೆಯ ಎರಡೂ ಕುಟುಂಬಗಳ ದೌರ್ಬಲ್ಯವನ್ನು ಗುರುತಿಸಿದ್ದೇನೆ. ಕ್ಷೇತ್ರದಲ್ಲಿ ನನ್ನ ಪರ ಅಲೆ ಇದೆ. ನಾನು ಗೆಲ್ಲುತ್ತೇನೆ ಎಂದು ತಿಳಿದು ಈ ರೀತಿಯ ಆರೋಪವನ್ನು ಸಿದ್ದರಾಮಯ್ಯ ಕಡೆಯಿಂದ ಮಾಡಿಸಿದ್ದಾರೆ’ ಎಂದು ಅವರು ದೂರಿದರು. </p>.<p>ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲಿದ್ದೇನೆ ಎಂದರು. ನೂರಾರು ಜನ ಬೆಂಬಲಿಗರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>