<p><strong>ದಾವಣಗೆರೆ</strong>: ಶ್ರೇಷ್ಠ ವಚನಕಾರ, ಕಾಯಕಯೋಗಿ ಸಿದ್ಧರಾಮೇಶ್ವರರ ಆದರ್ಶ ಎಂದಿಗೂ ಪ್ರಸ್ತುತ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಉದ್ಪಾಟಿಸಿ ಅವರು ಮಾತನಾಡಿದರು.</p>.<p>‘ಸಿದ್ಧರಾಮೇಶ್ವರ ಜೀವನ ಚರಿತ್ರೆಗೆ ಸಂಬಂಧಿಸಿದ ದಾಖಲೆಗಳು ವಚನ, ಕಾವ್ಯ ಶಾಸನ ಐತಿಹ್ಯಗಳಲ್ಲಿ ದೊರೆಯುತ್ತವೆ. ಶ್ರೀಶೈಲದ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದ ಅವರು, ಸೊನ್ನಲಿಗೆಗೆ ಬಂದು ದೇವಾಲಯ ಸ್ಥಾಪಿಸಿದರು. ಸಕಲ ಜೀವಗಳಿಗಾಗಿ ಕೆರೆ– ಕಟ್ಟೆಗಳನ್ನು ಕಟ್ಟಿಸಿದರು’ ಎಂದು ಹೇಳಿದರು.</p>.<p>‘ಕಲ್ಯಾಣಕ್ಕೆ ತೆರಳಿ ಚನ್ನಬಸವಣ್ಣನವರಿಂದ ಇಷ್ಟಲಿಂಗದೀಕ್ಷೆ ಪಡೆದರು. ಅನುಭವ ಮಂಟಪದಲ್ಲಿ ಪಾಲ್ಗೊಂಡು, ಮಹಾಶಿವಯೋಗಿಯಾದರು’ ಎಂದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಶ್ರೇಷ್ಠ ವಚನಕಾರ, ಕಾಯಕಯೋಗಿ ಸಿದ್ಧರಾಮೇಶ್ವರರ ಆದರ್ಶ ಎಂದಿಗೂ ಪ್ರಸ್ತುತ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಉದ್ಪಾಟಿಸಿ ಅವರು ಮಾತನಾಡಿದರು.</p>.<p>‘ಸಿದ್ಧರಾಮೇಶ್ವರ ಜೀವನ ಚರಿತ್ರೆಗೆ ಸಂಬಂಧಿಸಿದ ದಾಖಲೆಗಳು ವಚನ, ಕಾವ್ಯ ಶಾಸನ ಐತಿಹ್ಯಗಳಲ್ಲಿ ದೊರೆಯುತ್ತವೆ. ಶ್ರೀಶೈಲದ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದ ಅವರು, ಸೊನ್ನಲಿಗೆಗೆ ಬಂದು ದೇವಾಲಯ ಸ್ಥಾಪಿಸಿದರು. ಸಕಲ ಜೀವಗಳಿಗಾಗಿ ಕೆರೆ– ಕಟ್ಟೆಗಳನ್ನು ಕಟ್ಟಿಸಿದರು’ ಎಂದು ಹೇಳಿದರು.</p>.<p>‘ಕಲ್ಯಾಣಕ್ಕೆ ತೆರಳಿ ಚನ್ನಬಸವಣ್ಣನವರಿಂದ ಇಷ್ಟಲಿಂಗದೀಕ್ಷೆ ಪಡೆದರು. ಅನುಭವ ಮಂಟಪದಲ್ಲಿ ಪಾಲ್ಗೊಂಡು, ಮಹಾಶಿವಯೋಗಿಯಾದರು’ ಎಂದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>