ನಂತರ ಪೂರ್ಣಕುಂಭಗಳೊಂದಿಗೆ ದೇಗುಲಕ್ಕೆ ಬಂದು ಕದಳಿ ಮಂಟಪದಲ್ಲಿ ಪೂಜೆ ಸಲ್ಲಿಸಿ 1001 ದೀಪಗಳನ್ನು ಬೆಳಗಿಸಲಾಗುತ್ತದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಶಿವಗಂಗಾ ಬಸವರಾಜು, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ರಾಜ್ಯ ರೈತ ಮುಖಂಡ ತೇಜಸ್ವಿ ಪಟೇಲ್, ತಹಶೀಲ್ದಾರ್ ಎರ್ರಿಸ್ವಾಮಿ, ಸಿಪಿಐ ಪ್ರಶಾಂತ್ ಮುನ್ನೋಳಿ, ಜಾನಪದ ವಿದ್ವಾಂಸ ಶಂಭು ಬಳಿಗಾರ್, ಸಾಹಿತಿ ಎಸ್.ಟಿ.ಶಾಂತಗಂಗಾಧರ, ದಾವಣಗೆರೆ ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಭಾಗವಹಿಸಲಿದ್ದರಾರೆ.