ಪಟ್ಟಣದ ಕಟ್ಟಿಸೇತುರಾಮಚಾರ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯ ಟಿ.ಎಂ. ರಾಜಶೇಖರ ಧ್ವಜಾರೋಹಣ ನೆರವೇರಿಸಿದರು. ಬಾಲಕೀಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ಲಿಂಗಾನಂದ ಧ್ವಜಾರೋಹಣ ಮಾಡಿದರು. ಸರ್ಕಾರಿ ಪ್ರೌಢಶಾಲೆ, ಶಿಕ್ಷಣ ಇಲಾಖೆ, ಪುರಸಭೆ, ತಾಲ್ಲೂಕು ಪಂಚಾಯಿತಿ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿ ತಾಲ್ಲೂಕಿನ ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಧ್ವಜಾರೋಹಣ ನೆರವೇರಿಸಿ ಉತ್ಸವ ಆಚರಿಸಲಾಯಿತು.