<p><strong>ದಾವಣಗೆರೆ</strong>: ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಕಲಗುಟಕರ್ ಹಮ್ಮಿಕೊಂಡಿರುವ ‘ದೆಹಲಿ ಚಲೋ’ ಏಕಾಂಗಿ ಪಾದಯಾತ್ರೆ ಮಂಗಳವಾರ ದಾವಣಗೆರೆಗೆ ಆಗಮಿಸಿತು.</p>.<p>ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅವರನ್ನು ವಿವಿಧ ಸಂಘಟನೆಯ ಮುಖಂಡರು ಸ್ವಾಗತಿಸಿದರು.</p>.<p>ನಾಗರಾಜ್ ಕಲಗುಟಕರ್ ಮಾತನಾಡಿ, ‘ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸದೇ ತರಾತುರಿಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಇದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ. ಇಂತಹ ಸರ್ವಾಧಿಕಾರಿ ಧೋರಣೆಯ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ’ ಎಂದು ಹೇಳಿದರು.</p>.<p>‘ಬಾಗಲಕೋಟೆ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಿ ರೈತರ ಸಂಕಷ್ಟವನ್ನು ನೋಡಿದ್ದೇನೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಫೆ.12ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಈವರೆಗೆ 700 ಕಿ.ಮೀ. ಕ್ರಮಿಸಿದ್ದು, 17 ಜಿಲ್ಲೆ ಇದಾಗಿದೆ. ನವೆಂಬರ್ 26ಕ್ಕೆ ನವದೆಹಲಿ ತಲುಪಲಿದ್ದು, 7 ಸಾವಿರ ಕಿ.ಮೀ. ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ನಾಗರಾಜ್ ಮಾಹಿತಿ ನೀಡಿದರು.</p>.<p>ಹಿರಿಯ ವಕೀಲ ಎಲ್.ಎಚ್. ಅರುಣ್ಕುಮಾರ್ ಮಾತನಾಡಿ, ‘7 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದರೂ ಇದನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು, ಆಳುವ ಸರ್ಕಾರ ಈ ಹೋರಾಟಕ್ಕೆ ಮನ್ನಣೆ ನೀಡಿಲ್ಲ. ಈ ಹಠಮಾರಿ ಧೋರಣೆಯಿಂದಾಗಿ ಮೂಲಭೂತವಾದಿಗಳಿಗೆ ಅನುಕೂಲ<br />ವಾಗಿದ್ದು, ಕೃಷಿಕರ ಜೀವನ ನಾಶವಾಗಿದೆ’ ಎಂದು ಆರೋಪಿಸಿದರು.</p>.<p>ವಕೀಲ ಅನೀಸ್ ಪಾಷ, ಮುಖಂಡರಾದ ಕರಿಬಸಪ್ಪ, ಆವರಗೆರೆ ಚಂದ್ರು, ಶ್ರೀನಿವಾಸ್, ಆನಂದರಾಜ್, ಗುಡ್ಡಪ್ಪ, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ನಾಗರಾಜ್ ಕಲಗುಟಕರ್ ಹಮ್ಮಿಕೊಂಡಿರುವ ‘ದೆಹಲಿ ಚಲೋ’ ಏಕಾಂಗಿ ಪಾದಯಾತ್ರೆ ಮಂಗಳವಾರ ದಾವಣಗೆರೆಗೆ ಆಗಮಿಸಿತು.</p>.<p>ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅವರನ್ನು ವಿವಿಧ ಸಂಘಟನೆಯ ಮುಖಂಡರು ಸ್ವಾಗತಿಸಿದರು.</p>.<p>ನಾಗರಾಜ್ ಕಲಗುಟಕರ್ ಮಾತನಾಡಿ, ‘ವಿರೋಧ ಪಕ್ಷಗಳ ಜೊತೆ ಚರ್ಚೆ ನಡೆಸದೇ ತರಾತುರಿಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದು, ಇದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ. ಇಂತಹ ಸರ್ವಾಧಿಕಾರಿ ಧೋರಣೆಯ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ’ ಎಂದು ಹೇಳಿದರು.</p>.<p>‘ಬಾಗಲಕೋಟೆ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಿ ರೈತರ ಸಂಕಷ್ಟವನ್ನು ನೋಡಿದ್ದೇನೆ. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಫೆ.12ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಈವರೆಗೆ 700 ಕಿ.ಮೀ. ಕ್ರಮಿಸಿದ್ದು, 17 ಜಿಲ್ಲೆ ಇದಾಗಿದೆ. ನವೆಂಬರ್ 26ಕ್ಕೆ ನವದೆಹಲಿ ತಲುಪಲಿದ್ದು, 7 ಸಾವಿರ ಕಿ.ಮೀ. ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ’ ಎಂದು ನಾಗರಾಜ್ ಮಾಹಿತಿ ನೀಡಿದರು.</p>.<p>ಹಿರಿಯ ವಕೀಲ ಎಲ್.ಎಚ್. ಅರುಣ್ಕುಮಾರ್ ಮಾತನಾಡಿ, ‘7 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದರೂ ಇದನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು, ಆಳುವ ಸರ್ಕಾರ ಈ ಹೋರಾಟಕ್ಕೆ ಮನ್ನಣೆ ನೀಡಿಲ್ಲ. ಈ ಹಠಮಾರಿ ಧೋರಣೆಯಿಂದಾಗಿ ಮೂಲಭೂತವಾದಿಗಳಿಗೆ ಅನುಕೂಲ<br />ವಾಗಿದ್ದು, ಕೃಷಿಕರ ಜೀವನ ನಾಶವಾಗಿದೆ’ ಎಂದು ಆರೋಪಿಸಿದರು.</p>.<p>ವಕೀಲ ಅನೀಸ್ ಪಾಷ, ಮುಖಂಡರಾದ ಕರಿಬಸಪ್ಪ, ಆವರಗೆರೆ ಚಂದ್ರು, ಶ್ರೀನಿವಾಸ್, ಆನಂದರಾಜ್, ಗುಡ್ಡಪ್ಪ, ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>