<p><strong>ದಾವಣಗೆರೆ</strong>: ಪರಿಸರ ಸಂರಕ್ಷಣೆಯ ಉದ್ದೇಶದಿಂದ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆ ಬಳಿಕವೂ ಪ್ಲಾಸ್ಟಿಕ್ ಬಳಸಿದರೆ ದಂಡ ಅಥವಾ ಉದ್ದಿಮೆ ರಹದಾರಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಎಚ್ಚರಿಕೆ ನೀಡಿದರು.</p><p>ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪರಿಸರ ಸಂರಕ್ಷಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೋಟೆಲ್, ಕಲ್ಯಾಣ ಮಂಟಪ, ಬಟ್ಟೆ ಅಂಗಡಿ, ಕ್ಯಾಟರಿಂಗ್ ಹಾಗೂ ಆಸ್ಪತ್ರೆಯ ಮಾಲೀಕರಿಗೆ ಮನವರಿಕೆ ಮಾಡಿಕೊಡುವ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪಾದನೆಗೆ ನಿಷೇಧವಿದೆ. ಆದರೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಮಾಡಬೇಕಾಗಿದೆ. ಪಾಲಿಕೆ ಕಸ ಸಂಗ್ರಹ ವಾಹನಗಳು ಬಂದಾಗ ನಾಗರಿಕರು ಹಸಿ-ಕಸ ಮತ್ತು ಒಣಕಸವನ್ನು ವಿಂಗಡಿಸಿ ನೀಡಬೇಕು’ ಎಂದು ಹೇಳಿದರು.</p>.<p>‘ಕಲ್ಯಾಣ ಮಂಟಪದಲ್ಲಿ ಉತ್ಪತ್ತಿಯಾಗುವ ಕಸವದಲ್ಲಿ ಪ್ಲಾಸ್ಟಿಕ್ ಪ್ರತ್ಯೇಕಿಸಿ ನೀಡಬೇಕು. ಬಾಳೆ ಎಲೆಯನ್ನು ಪ್ಲಾಸ್ಟಿಕ್ನಲ್ಲಿ ಕೊಡಬಾರದು. ಬಟ್ಟೆ ಅಂಗಡಿಯಲ್ಲಿ ಬಟ್ಟೆ ಬ್ಯಾಗ್ಗಳನ್ನು ಬಳಕೆಯನ್ನು ಪ್ರೋತ್ಸಾಹಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಸಿದ್ಧ ಆಹಾರ ಪೂರೈಕೆದಾರರು ಸಹ ಏಕ ಬಳಕೆಯ ಪ್ಲಾಸ್ಟಿಕ್ನ್ನು ಉಪಯೋಗಿಸಬಾರದು. ಪ್ಲಾಸ್ಟಿಕ್ನಲ್ಲಿ ಆಹಾರವನ್ನು ಪ್ಯಾಕಿಂಗ್ ಮಾಡಬಾರದು. ಕ್ಲಿನಿಕ್ ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವೈದ್ಯಕೀಯ ತ್ಯಾಜ್ಯವನ್ನು ಪಾಲಿಕೆ ಕಸದ ಗಾಡಿಗಳಿಗೆ ನೀಡಬಾರದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಪರಿಸರ ಸಂರಕ್ಷಣೆಯ ಉದ್ದೇಶದಿಂದ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆ ಬಳಿಕವೂ ಪ್ಲಾಸ್ಟಿಕ್ ಬಳಸಿದರೆ ದಂಡ ಅಥವಾ ಉದ್ದಿಮೆ ರಹದಾರಿಯನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಎಚ್ಚರಿಕೆ ನೀಡಿದರು.</p><p>ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪರಿಸರ ಸಂರಕ್ಷಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಹೋಟೆಲ್, ಕಲ್ಯಾಣ ಮಂಟಪ, ಬಟ್ಟೆ ಅಂಗಡಿ, ಕ್ಯಾಟರಿಂಗ್ ಹಾಗೂ ಆಸ್ಪತ್ರೆಯ ಮಾಲೀಕರಿಗೆ ಮನವರಿಕೆ ಮಾಡಿಕೊಡುವ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪಾದನೆಗೆ ನಿಷೇಧವಿದೆ. ಆದರೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ವಹಣೆಯನ್ನು ವೈಜ್ಞಾನಿಕವಾಗಿ ಮಾಡಬೇಕಾಗಿದೆ. ಪಾಲಿಕೆ ಕಸ ಸಂಗ್ರಹ ವಾಹನಗಳು ಬಂದಾಗ ನಾಗರಿಕರು ಹಸಿ-ಕಸ ಮತ್ತು ಒಣಕಸವನ್ನು ವಿಂಗಡಿಸಿ ನೀಡಬೇಕು’ ಎಂದು ಹೇಳಿದರು.</p>.<p>‘ಕಲ್ಯಾಣ ಮಂಟಪದಲ್ಲಿ ಉತ್ಪತ್ತಿಯಾಗುವ ಕಸವದಲ್ಲಿ ಪ್ಲಾಸ್ಟಿಕ್ ಪ್ರತ್ಯೇಕಿಸಿ ನೀಡಬೇಕು. ಬಾಳೆ ಎಲೆಯನ್ನು ಪ್ಲಾಸ್ಟಿಕ್ನಲ್ಲಿ ಕೊಡಬಾರದು. ಬಟ್ಟೆ ಅಂಗಡಿಯಲ್ಲಿ ಬಟ್ಟೆ ಬ್ಯಾಗ್ಗಳನ್ನು ಬಳಕೆಯನ್ನು ಪ್ರೋತ್ಸಾಹಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಸಿದ್ಧ ಆಹಾರ ಪೂರೈಕೆದಾರರು ಸಹ ಏಕ ಬಳಕೆಯ ಪ್ಲಾಸ್ಟಿಕ್ನ್ನು ಉಪಯೋಗಿಸಬಾರದು. ಪ್ಲಾಸ್ಟಿಕ್ನಲ್ಲಿ ಆಹಾರವನ್ನು ಪ್ಯಾಕಿಂಗ್ ಮಾಡಬಾರದು. ಕ್ಲಿನಿಕ್ ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಯಾವುದೇ ಕಾರಣಕ್ಕೂ ವೈದ್ಯಕೀಯ ತ್ಯಾಜ್ಯವನ್ನು ಪಾಲಿಕೆ ಕಸದ ಗಾಡಿಗಳಿಗೆ ನೀಡಬಾರದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>