ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವು ಕಚ್ಚಿ ಬಾಲಕ ಸಾವು

Last Updated 9 ಜೂನ್ 2021, 2:24 IST
ಅಕ್ಷರ ಗಾತ್ರ

ಮಲೇಬೆನ್ನೂರು: ಸಮೀಪದ ಇಂಗಳಗುಂದಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ.
ಕೊಪ್ಪದ ಮಹಾದೇವಪ್ಪ ಅವರ ಪುತ್ರ ಸಂಜೀವ (16) ಮೃತಪಟ್ಟ ಬಾಲಕ.

ಜಮೀನಿನಲ್ಲಿ ಹಸುವಿಗೆ ಹುಲ್ಲು ಸಂಗ್ರಹಿಸಲು ಹೋಗಿದ್ದ ವೇಳೆ ಹಾವು ಕಚ್ಚಿದೆ.

ಚಿಕಿತ್ಸೆಗಾಗಿ ಹರಿಹರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ವೈದ್ಯರ ಸಲಹೆಯ ಮೇರೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಕೋವಿಡ್ ಆಸ್ಪತ್ರೆಯಾಗಿದ್ದರಿಂದ ಬಾಪೂಜಿ ಆಸ್ಪತ್ರೆಗೆ ಕರೆದೊಯ್ಯವಂತೆ ತಿಳಿಸಿದ್ದಾರೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.

ಹುಣಸೆಕಟ್ಟೆ: ವ್ಯಕ್ತಿ ಸಾವು

ದಾವಣಗೆರೆ: ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹೃದಯಾಘಾತದ ಶಂಕೆ ವ್ಯಕ್ತಪಡಿಸಲಾಗಿದೆ.

ಗ್ರಾಮದ ವಿಜಯಕುಮಾರ(55) ಮೃತಪಟ್ಟವರು. 5 ವರ್ಷಗಳ ತಲೆಗೆ ಪೆಟ್ಟು ಬಿದ್ದಿದ್ದು, ಬುದ್ಧಿಹೀನರಾಗಿ ವರ್ತಿಸುತ್ತಿದ್ದರು. ಜಮೀನಿಗೆ ಹೋಗಿ ಬರುತ್ತೇವೆ ಎಂದು ಎರಡು ದಿನಗಳ ಹಿಂದೆ ಹೋಗಿದ್ದು, ಮನೆಗೆ ಬಂದಿರಲಿಲ್ಲ. ಜಮೀನಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT