<p><strong>ದಾವಣಗೆರೆ: </strong>ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಪುಣ್ಯಸ್ಮರಣೆಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಗೃಹ ಕಚೇರಿ ಶಿವಪಾರ್ವತಿಯಲ್ಲಿ ಸರಳವಾಗಿ ಮಾಡಲಾಯಿತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ‘8 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಸಮಪಾಲು ಸಮಬಾಳು ತತ್ವದಡಿ ಆಡಳಿತ ನಡೆಸಿ ಎಲ್ಲಾ ವರ್ಗದ ಜನತೆಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತಂದರು’ ಎಂದು ಸ್ಮರಿಸಿದರು.</p>.<p>ಜೀತ ಪದ್ದತಿ ರದ್ದು, ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಿಕ ಮಸೂದೆಯನ್ನು ಜಾರಿ ಮಾಡಿದ್ದರು. ತಮ್ಮ ಜಮೀನನ್ನು ಸಹ ಉಳುವವನಿಗೆ ನೀಡುವ ಮೂಲಕ ಮಾದರಿಯಾಗಿದ್ದರು. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದರು.</p>.<p>ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ‘ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿಕ ಮಸೂದೆಯನ್ನು ಜಾರಿ ಮಾಡುವ ಮೂಲಕ ಈ ರಾಜ್ಯದ ಗೆಣಿದಾರರ ವಿರೋಧ ಕಟ್ಟಿಕೊಂಡರು ಸಹ ಬಡವರ ಪರವಾಗಿ ನಿಂತ ಧೀಮಂತ ವ್ಯಕ್ತಿ ಅರಸು’ ಎಂದರು.</p>.<p>ಪಾಲಿಕೆ ಸದಸ್ಯ ಚಮನ್ ಸಾಬ್, ‘ಶೋಷಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿದ ಮೊದಲ ಮುಖ್ಯಮಂತ್ರಿ ಅರಸು’ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯರಾದ ಜಾಕೀರ್, ಸೈಯದ್ ಚಾರ್ಲಿ, ಉದಯ್ ಕುಮಾರ್, ಶಫೀಕ್ ಪಂಡಿತ್, ಸಿಮೇಎಣ್ಣೆ ಪರಮೇಶ್, ಕೊಡಪಾನ ದಾದಾಪೀರ್, ಲಾಲ್ ಆರೀಫ್, ಶಾಮನೂರು ಕುಮಾರ್, ಹರೀಶ್ ಕೆ.ಎಲ್. ಬಸಾಪುರ, ಮೊಟ್ಟೆ ದಾದಾಪೀರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಪುಣ್ಯಸ್ಮರಣೆಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಗೃಹ ಕಚೇರಿ ಶಿವಪಾರ್ವತಿಯಲ್ಲಿ ಸರಳವಾಗಿ ಮಾಡಲಾಯಿತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ‘8 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಸಮಪಾಲು ಸಮಬಾಳು ತತ್ವದಡಿ ಆಡಳಿತ ನಡೆಸಿ ಎಲ್ಲಾ ವರ್ಗದ ಜನತೆಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತಂದರು’ ಎಂದು ಸ್ಮರಿಸಿದರು.</p>.<p>ಜೀತ ಪದ್ದತಿ ರದ್ದು, ಉಳುವವನೇ ಭೂಮಿ ಒಡೆಯ ಎಂಬ ಕ್ರಾಂತಿಕಾರಿಕ ಮಸೂದೆಯನ್ನು ಜಾರಿ ಮಾಡಿದ್ದರು. ತಮ್ಮ ಜಮೀನನ್ನು ಸಹ ಉಳುವವನಿಗೆ ನೀಡುವ ಮೂಲಕ ಮಾದರಿಯಾಗಿದ್ದರು. ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದರು.</p>.<p>ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ‘ಉಳುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿಕ ಮಸೂದೆಯನ್ನು ಜಾರಿ ಮಾಡುವ ಮೂಲಕ ಈ ರಾಜ್ಯದ ಗೆಣಿದಾರರ ವಿರೋಧ ಕಟ್ಟಿಕೊಂಡರು ಸಹ ಬಡವರ ಪರವಾಗಿ ನಿಂತ ಧೀಮಂತ ವ್ಯಕ್ತಿ ಅರಸು’ ಎಂದರು.</p>.<p>ಪಾಲಿಕೆ ಸದಸ್ಯ ಚಮನ್ ಸಾಬ್, ‘ಶೋಷಿತ ಸಮುದಾಯಕ್ಕೆ ನ್ಯಾಯ ಕಲ್ಪಿಸಿದ ಮೊದಲ ಮುಖ್ಯಮಂತ್ರಿ ಅರಸು’ ಎಂದು ತಿಳಿಸಿದರು.</p>.<p>ಪಾಲಿಕೆ ಸದಸ್ಯರಾದ ಜಾಕೀರ್, ಸೈಯದ್ ಚಾರ್ಲಿ, ಉದಯ್ ಕುಮಾರ್, ಶಫೀಕ್ ಪಂಡಿತ್, ಸಿಮೇಎಣ್ಣೆ ಪರಮೇಶ್, ಕೊಡಪಾನ ದಾದಾಪೀರ್, ಲಾಲ್ ಆರೀಫ್, ಶಾಮನೂರು ಕುಮಾರ್, ಹರೀಶ್ ಕೆ.ಎಲ್. ಬಸಾಪುರ, ಮೊಟ್ಟೆ ದಾದಾಪೀರ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>