<p><strong>ಕಡರನಾಯ್ಕನಹಳ್ಳಿ</strong>: ‘ಸಮಾಜ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮ ಎಂದರೆ ದಯೆ, ಪ್ರಾಮಾಣಿಕ ದುಡಿಮೆ, ಸೇವೆ. ಇದೇ ಬದುಕಾಗಬೇಕು ಎಂಬುದೇ ಸತ್ಸಂಗದ ಸಾರ’ ಎಂದು ಗುರು ಸಿದ್ದಾಶ್ರಮದ ಯೋಗಾನಂದ ಶ್ರೀ ತಿಳಿಸಿದರು.</p>.<p>ಸಮೀಪದ ಯಲವಟ್ಟಿ ಗ್ರಾಮದ ಗುರು ಸಿದ್ದಾಶ್ರಮದಲ್ಲಿ ಬಾದಾಮಿ ಅಮಾವಾಸ್ಯೆಯ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಆಹಾರವು ಶರೀರದ ಸ್ವಾಸ್ಥ್ಯ ಕಾಪಾಡುತ್ತದೆ. ಆದರೆ ಮಿತ ಆಹಾರ, ಮಿತ ವ್ಯಾಯಾಮದಿಂದ ಉತ್ತಮ ದೇಹಾರೋಗ್ಯ ಸಾಧ್ಯ. ತ್ಯಾಗ ಮನೋಭಾವದಿಂದ ಮನಸು ಹಗುರವಾಗುತ್ತದೆ. ಕಾಯಕ ಕಾಯಕಲ್ಪ ನೀಡುತ್ತದೆ. ಕಾಯಕದಲ್ಲೇ ದೇವರನ್ನು ಕಾಣಬೇಕು’ ಎಂದು ಅಧ್ಯಾತ್ಮ ಚಿಂತಕ ಡಿ. ಸಿದ್ದೇಶ್ ತಿಳಿಸಿದರು.</p>.<p>ಅಮಾವಾಸ್ಯೆ ಸತ್ಸಂಗದ ಅಂಗವಾಗಿ ಕರ್ತೃ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜೆ, ಪೂಜಾಲಂಕಾರ ಮಾಡಲಾಗಿತ್ತು. ನಂತರ ಯೋಗಾನಂದ ಶ್ರೀಗಳ ಕಿರೀಟ ಪೂಜೆ ನಡೆಯಿತು. </p>.<p>ಭಕ್ತರು ಅನ್ನಸಂತರ್ಪಣೆ ವ್ಯವಸ್ಥೆ ಮಾಡಿದ್ದರು. ಶಿವಭಜನಾ ಮಂಡಳಿ ಭಜನಾ ಹಾಡುಗಳನ್ನು ಪ್ರಸ್ತುತಪಡಿಸಿತು. ಹೊಳೆ ಸಿರಿಗೆರೆ, ಯಲವಟ್ಟಿ, ಕುಂಬಳೂರು, ಜಿಗಳಿ, ಕಡರನಾಯ್ಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ‘ಸಮಾಜ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮ ಎಂದರೆ ದಯೆ, ಪ್ರಾಮಾಣಿಕ ದುಡಿಮೆ, ಸೇವೆ. ಇದೇ ಬದುಕಾಗಬೇಕು ಎಂಬುದೇ ಸತ್ಸಂಗದ ಸಾರ’ ಎಂದು ಗುರು ಸಿದ್ದಾಶ್ರಮದ ಯೋಗಾನಂದ ಶ್ರೀ ತಿಳಿಸಿದರು.</p>.<p>ಸಮೀಪದ ಯಲವಟ್ಟಿ ಗ್ರಾಮದ ಗುರು ಸಿದ್ದಾಶ್ರಮದಲ್ಲಿ ಬಾದಾಮಿ ಅಮಾವಾಸ್ಯೆಯ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಆಹಾರವು ಶರೀರದ ಸ್ವಾಸ್ಥ್ಯ ಕಾಪಾಡುತ್ತದೆ. ಆದರೆ ಮಿತ ಆಹಾರ, ಮಿತ ವ್ಯಾಯಾಮದಿಂದ ಉತ್ತಮ ದೇಹಾರೋಗ್ಯ ಸಾಧ್ಯ. ತ್ಯಾಗ ಮನೋಭಾವದಿಂದ ಮನಸು ಹಗುರವಾಗುತ್ತದೆ. ಕಾಯಕ ಕಾಯಕಲ್ಪ ನೀಡುತ್ತದೆ. ಕಾಯಕದಲ್ಲೇ ದೇವರನ್ನು ಕಾಣಬೇಕು’ ಎಂದು ಅಧ್ಯಾತ್ಮ ಚಿಂತಕ ಡಿ. ಸಿದ್ದೇಶ್ ತಿಳಿಸಿದರು.</p>.<p>ಅಮಾವಾಸ್ಯೆ ಸತ್ಸಂಗದ ಅಂಗವಾಗಿ ಕರ್ತೃ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜೆ, ಪೂಜಾಲಂಕಾರ ಮಾಡಲಾಗಿತ್ತು. ನಂತರ ಯೋಗಾನಂದ ಶ್ರೀಗಳ ಕಿರೀಟ ಪೂಜೆ ನಡೆಯಿತು. </p>.<p>ಭಕ್ತರು ಅನ್ನಸಂತರ್ಪಣೆ ವ್ಯವಸ್ಥೆ ಮಾಡಿದ್ದರು. ಶಿವಭಜನಾ ಮಂಡಳಿ ಭಜನಾ ಹಾಡುಗಳನ್ನು ಪ್ರಸ್ತುತಪಡಿಸಿತು. ಹೊಳೆ ಸಿರಿಗೆರೆ, ಯಲವಟ್ಟಿ, ಕುಂಬಳೂರು, ಜಿಗಳಿ, ಕಡರನಾಯ್ಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>