<p><strong>ಜಗಳೂರು</strong>: ಹರಿಹರದಲ್ಲಿ ಜನವರಿ 15ರಂದು ಜರುಗಲಿರುವ ಹರ ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವೀರಶೈವ ಪಂಚಮಸಾಲಿ ಸಮುದಾಯದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ್ ಹೇಳಿದರು. </p>.<p>ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಹರ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. </p>.<p>ಜಾತ್ರೆಯಲ್ಲಿ ನಡೆಯುವ ದಾಸೋಹಕ್ಕಾಗಿ ವೀರಶೈವ ಪಂಚಮಸಾಲಿ ಸಮುದಾಯದಿಂದ 50 ಸಾವಿರ ರೊಟ್ಟಿ, ಅಕ್ಕಿ ಹಾಗೂ ದವಸ ಧಾನ್ಯಗಳನ್ನು ಭಕ್ತರು ಒದಗಿಸುತ್ತಿದ್ದಾರೆ. ಮಠದ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ಧ್ಯಾನ, ದಾಸೋಹ ಮಂದಿರ ಮತ್ತು ವಸತಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. </p>.<p>ಮಕರ ಸಂಕ್ರಮಣದಂದು ನಡೆಯುವ ವಿಶೇಷ ಜಾತ್ರೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಿಳಾ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ನಾಗರಾಜ್ ಹೇಳಿದರು. </p>.<p>ವೀರಶೈವ ಪಂಚಮಸಾಲಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಯು.ಜಿ.ಶಿವಕುಮಾರ್, ಮುಖಂಡರಾದ ಅಜ್ಜಪ್ಪ ನಾಡಿಗರ್, ಮಲ್ಲಿನಾಥ್, ಹೊಸಕೆರೆ ಮುಕುಂದ, ಶಂಭುಲಿಂಗಪ್ಪ, ಗಡಿಮಾಕುಂಟೆ ಸಿದ್ದೇಶ್, ಎಂ.ಎಸ್. ಪಾಟೀಲ್ ಹಾಗೂ ಇನ್ನಿತರರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ಹರಿಹರದಲ್ಲಿ ಜನವರಿ 15ರಂದು ಜರುಗಲಿರುವ ಹರ ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ವೀರಶೈವ ಪಂಚಮಸಾಲಿ ಸಮುದಾಯದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ್ ಹೇಳಿದರು. </p>.<p>ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಹರ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. </p>.<p>ಜಾತ್ರೆಯಲ್ಲಿ ನಡೆಯುವ ದಾಸೋಹಕ್ಕಾಗಿ ವೀರಶೈವ ಪಂಚಮಸಾಲಿ ಸಮುದಾಯದಿಂದ 50 ಸಾವಿರ ರೊಟ್ಟಿ, ಅಕ್ಕಿ ಹಾಗೂ ದವಸ ಧಾನ್ಯಗಳನ್ನು ಭಕ್ತರು ಒದಗಿಸುತ್ತಿದ್ದಾರೆ. ಮಠದ ಆವರಣದಲ್ಲಿ ₹50 ಕೋಟಿ ವೆಚ್ಚದಲ್ಲಿ ಧ್ಯಾನ, ದಾಸೋಹ ಮಂದಿರ ಮತ್ತು ವಸತಿಗೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. </p>.<p>ಮಕರ ಸಂಕ್ರಮಣದಂದು ನಡೆಯುವ ವಿಶೇಷ ಜಾತ್ರೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಿಳಾ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ನಾಗರಾಜ್ ಹೇಳಿದರು. </p>.<p>ವೀರಶೈವ ಪಂಚಮಸಾಲಿ ಸಮುದಾಯದ ತಾಲ್ಲೂಕು ಘಟಕದ ಅಧ್ಯಕ್ಷ ಯು.ಜಿ.ಶಿವಕುಮಾರ್, ಮುಖಂಡರಾದ ಅಜ್ಜಪ್ಪ ನಾಡಿಗರ್, ಮಲ್ಲಿನಾಥ್, ಹೊಸಕೆರೆ ಮುಕುಂದ, ಶಂಭುಲಿಂಗಪ್ಪ, ಗಡಿಮಾಕುಂಟೆ ಸಿದ್ದೇಶ್, ಎಂ.ಎಸ್. ಪಾಟೀಲ್ ಹಾಗೂ ಇನ್ನಿತರರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>