ಜ.6ರಂದು ನಡೆಯುವ ಸಂಗೀತೋತ್ಸವವನ್ನು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಉದ್ಘಾಟಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ್ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎಂ.ಜೆ. ಮುರುಗೇಶ್ ಆರಾಧ್ಯ, ಆಡಿಟರ್ ಉಮೇಶ್ ಶೆಟ್ಟಿ, ಮಾಜಿ ನಿರ್ದೇಶಕ ಎಪಿಎಂಸಿ ಟಿ.ಕೆ. ವೀರಪ್ಪ ಭಾಗವಹಿಸಲಿದ್ದಾರೆ. ಸೋಮೇಶ್ವರ ವಿದ್ಯಾಲಯದ ಅಧ್ಯಕ್ಷ ಎಚ್.ಆರ್. ಅಶೋಕ್ ರೆಡ್ಡಿ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ.98.72ಅಂಕ ಪಡೆದ ಕೆ.ಎಸ್. ಕ್ರೀನಾ ಇವರಿಗೆ ‘ಸಾಧನಸಿರಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನಂತರ ನಡೆಯುವ ಸಂಗೀತೋತ್ಸವದಲ್ಲಿ ಖ್ಯಾತ ಹಿನ್ನೆಲೆ ಗಾಯಕರಾದ ರಾಜೇಶ್ ಕೃಷ್ಣನ್ ಮತ್ತು ಎಂ.ಡಿ. ಪಲ್ಲವಿ ಹಾಡಿ ರಂಜಿಸಲಿದ್ದಾರೆ ಎಂದು ವಿವರಿಸಿದರು.