ರಿಯಾಯಿತಿ ದರಕ್ಕೆ ಬಿತ್ತನೆ ಬೀಜ: ತಾಲ್ಲೂಕಿನಲ್ಲಿ ಪ್ರಮುಖವಾಗಿ ಮೆಕ್ಕೆಜೋಳ, ಊಟದ ಜೋಳ, ಶೇಂಗಾ, ತೊಗರಿ, ಹತ್ತಿ, ತೊಗರಿ ಬೆಳೆಗಳ ಜೊತೆಗೆ ಇನ್ನಿತರ ದ್ವಿದಳ ದಾನ್ಯಗಳ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿ, ನ್ಯಾಮತಿ, ಸಾಸ್ವೆಹಳ್ಳಿ, ಚೀಲೂರು, ಗೋವಿನಕೋವಿ, ಕುಂದೂರು ಹೋಬಳಿಗಳಲ್ಲಿ ಹಾಗೂ ನಗರದ ಟಿಎಪಿಸಿಎಂಎಸ್ ಸೊಸೈಟಿಯಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ.