ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಕೊರೊನಾ ಸೋಂಕು ಶುಕ್ರವಾರ ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಕಾರಣ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೋಂ ಕ್ವಾರಂಟೈನ್ ಆಗಿದ್ದಾರೆ.
‘ತುರ್ತು ಸಂದರ್ಭದಲ್ಲಿ ಗೃಹ ಕಚೇರಿಯಲ್ಲಿ ಲಭ್ಯವಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಪಿಗೆ ಸೋಂಕು ದೃಢಪಟ್ಟ ಕಾರಣ ಅವರ ಪ್ರಾಥಮಿಕ ಸಂಪರ್ಕದ 18 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.