‘ಎತ್ತಿನಗಾಡಿ ಮೇಲೆ ಮರಳು ಸಾಗಿಸೋರು ಜೂಜು, ಮಟ್ಕಾ ಆಡಿದ್ದಾರಾ, ಅತ್ಯಾಚಾರ ಮಾಡಿದ್ದಾರಾ? ಹೊಟ್ಟೆ ಪಾಡಿಗೆ ಮರಳು ಸಾಗಾಣಿಕೆ ಮಾಡುತ್ತಿದ್ದಾರೆ. ಇವರ ತಂಟೆಗೆ ಬಂದ್ರೆ ನಾನು ಸುಮ್ಮನಿರಲ್ಲ. ತಾಕತ್ ಇದ್ರೆ ಸೀಜ್ ಮಾಡ್ರಿ.. ನೋಡೋಣ. ಬಡವರ ಹೊಟ್ಟೆ ಮೇಲೆ ಯಾಕ್ರೀ ಹೊಡೆಯಬೇಕು? ನೀವ್ಯಾರೂ ತಡೆಯಬಾರದು. ಮಟ್ಕಾ, ಜೂಜು ಆಡುವವರನ್ನು ಮಟ್ಟಹಾಕಲಿ. ತಾಲ್ಲೂಕಿನಲ್ಲಿ ಇಂದು ಕೇವಲ ₹ 3 ಸಾವಿರಕ್ಕೆ ಮರಳು ಸಿಗುತ್ತಿದೆ. ಈ ವ್ಯವಸ್ಥೆ ಇಲ್ಲದಿದ್ದರೆ ₹ 10 ಸಾವಿರಕ್ಕೆ ಮರಳು ದರ ಏರಿಕೆಯಾಗುತ್ತಿತ್ತು’–ಇಂತಹ ಮಾತು ವಿಡಿಯೊದಲ್ಲಿದೆ.