<p><strong>ದಾವಣಗೆರೆ</strong>: ತಾಲ್ಲೂಕಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿನ ನಾಲ್ಕು ಜಿಂಕೆಗಳ ಸಾವಿಗೆ ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಸಾಂಕ್ರಾಮಿಕ ಕಾಯಿಲೆ ಕಾರಣ ಎಂಬುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.</p><p>ಜ.16ರಿಂದ ಜ.18ರ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿದ್ದವು. ಮೃತ ಜಿಂಕೆಗಳ ದೇಹದ ಮಾದರಿಗಳನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಯೋಗಾಲಯದ ವರದಿ ಬುಧವಾರ ಅರಣ್ಯ ಇಲಾಖೆಯ ಅಧಿಕಾರಿಗಳ ಕೈಸೇರಿದೆ.</p><p>‘ಮೃಗಾಲಯದ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂಬುದು ಪ್ರಯೋಗಾಲಯದ ವರದಿಯಿಂದ ಖಚಿತವಾಗಿದೆ. ರೋಗಲಕ್ಷಣಗಳನ್ನು ಗಮನಿಸಿ ಉಳಿದ ಜಿಂಕೆಗಳಿಗೆ ನೀಡುತ್ತಿದ್ದ ಚಿಕಿತ್ಸೆಯನ್ನು ಮುಂದುವರಿಸಲಾಗುತ್ತಿದೆ. ಪಶು ವೈದ್ಯಕೀಯ ತಂಡ ಮೃಗಾಲಯದಲ್ಲಿ ಬೀಡುಬಿಟ್ಟಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎನ್. ಹರ್ಷವರ್ಧನ್ ತಿಳಿಸಿದ್ದಾರೆ.</p><p>ಈ ನಡುವೆ ಮೃಗಾಲಯದ ವನ್ಯಜೀವಿಗಳಿಗೆ ನೀಡುತ್ತಿರುವ ನೀರು ಮತ್ತು ಆಹಾರ ಸುರಕ್ಷಿತವಾಗಿದೆ ಎಂಬುದು ಪ್ರಯೋಗಾಲಯದ ವರದಿಯಲ್ಲಿ ಖಚಿತವಾಗಿದೆ. ಜಿಂಕೆಗಳ ಮೃತದೇಹದ ಜೊತೆಗೆ ಮೃಗಾಲಯದ ವನ್ಯಜೀವಿಗಳಿಗೆ ನೀಡುತ್ತಿದ್ದ ನೀರು ಹಾಗೂ ಆಹಾರದ ಮಾದರಿಗಳನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ತಾಲ್ಲೂಕಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿನ ನಾಲ್ಕು ಜಿಂಕೆಗಳ ಸಾವಿಗೆ ‘ಹೆಮರಾಜಿಕ್ ಸೆಪ್ಟಿಸೆಮಿಯಾ’ ಸಾಂಕ್ರಾಮಿಕ ಕಾಯಿಲೆ ಕಾರಣ ಎಂಬುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.</p><p>ಜ.16ರಿಂದ ಜ.18ರ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿದ್ದವು. ಮೃತ ಜಿಂಕೆಗಳ ದೇಹದ ಮಾದರಿಗಳನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಯೋಗಾಲಯದ ವರದಿ ಬುಧವಾರ ಅರಣ್ಯ ಇಲಾಖೆಯ ಅಧಿಕಾರಿಗಳ ಕೈಸೇರಿದೆ.</p><p>‘ಮೃಗಾಲಯದ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂಬುದು ಪ್ರಯೋಗಾಲಯದ ವರದಿಯಿಂದ ಖಚಿತವಾಗಿದೆ. ರೋಗಲಕ್ಷಣಗಳನ್ನು ಗಮನಿಸಿ ಉಳಿದ ಜಿಂಕೆಗಳಿಗೆ ನೀಡುತ್ತಿದ್ದ ಚಿಕಿತ್ಸೆಯನ್ನು ಮುಂದುವರಿಸಲಾಗುತ್ತಿದೆ. ಪಶು ವೈದ್ಯಕೀಯ ತಂಡ ಮೃಗಾಲಯದಲ್ಲಿ ಬೀಡುಬಿಟ್ಟಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎನ್. ಹರ್ಷವರ್ಧನ್ ತಿಳಿಸಿದ್ದಾರೆ.</p><p>ಈ ನಡುವೆ ಮೃಗಾಲಯದ ವನ್ಯಜೀವಿಗಳಿಗೆ ನೀಡುತ್ತಿರುವ ನೀರು ಮತ್ತು ಆಹಾರ ಸುರಕ್ಷಿತವಾಗಿದೆ ಎಂಬುದು ಪ್ರಯೋಗಾಲಯದ ವರದಿಯಲ್ಲಿ ಖಚಿತವಾಗಿದೆ. ಜಿಂಕೆಗಳ ಮೃತದೇಹದ ಜೊತೆಗೆ ಮೃಗಾಲಯದ ವನ್ಯಜೀವಿಗಳಿಗೆ ನೀಡುತ್ತಿದ್ದ ನೀರು ಹಾಗೂ ಆಹಾರದ ಮಾದರಿಗಳನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>