<p><strong>ದಾವಣಗೆರೆ</strong>: ನಗರದ ಚೌಕಿಪೇಟೆಯ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಸ್ವಾಮಿಗಳ 100ನೇ ವರ್ಷದ ಮಹಾ ರಥೋತ್ಸವ ಸೋಮವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.</p>.<p>ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಇಡಲಾಯಿತು. ಇದಕ್ಕೂ ಮೊದಲು ಜಯದೇವ ಜಗದ್ಗುರುಗಳ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿ ತಂದು, ರಥದ ಸುತ್ತ ಪ್ರದಕ್ಷಿಣೆ ಮಾಡಿಸಿ ರಥಾರೋಹಣ ಮಾಡಲಾಯಿತು.</p>.<p>ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಈ ವೇಳೆ ನೆರೆದಿದ್ದ ಭಕ್ತರು ಕಳಶದತ್ತ ಬಾಳೆ ಹಣ್ಣು ತೂರಿದರು. ಉತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತ ವಿದ್ಯುದ್ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಎಲ್ಲೆಲ್ಲೂ ವಾದ್ಯಗಳ ಸದ್ದು ಕೇಳಿಬರುತ್ತಿತ್ತು. ಜತೆಗೆ ನಾದಸ್ವರ, ನಂದಿಕೋಲು ಇನ್ನಿತರ ಕಲಾ ತಂಡಗಳು ಮೇಳೈಸಿದ್ದವು.</p>.<p>ಭಕ್ತರು ಹಣ್ಣು, ಹೂವು, ತೆಂಗಿನಕಾಯಿಯೊಂದಿಗೆ ಆಗಮಿಸಿ ಶಿವಯೋಗಿ ಬಕ್ಕೇಶ್ವರರನ್ನು ಸ್ಮರಣೆ ಮಾಡಿ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ಬೆಳಿಗ್ಗೆ ರುದ್ರಾಭಿಷೇಕ, ಹೋಳಿಗೆ ಎಡೆ ಕೊಡುವ ಸಂಪ್ರದಾಯ ಪಾಲಿಸಲಾಯಿತು.</p>.<p>ರಥೋತ್ಸವದ ವೇಳೆ ಹೆಬ್ಬಾಳು ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉದ್ಯಮಿಗಳಾದ ಎಸ್.ಎಸ್. ಗಣೇಶ್, ಎ.ಎಸ್. ವೀರಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ನಗರದ ಚೌಕಿಪೇಟೆಯ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಸ್ವಾಮಿಗಳ 100ನೇ ವರ್ಷದ ಮಹಾ ರಥೋತ್ಸವ ಸೋಮವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.</p>.<p>ವಿವಿಧ ಬಗೆಯ ಹೂವುಗಳಿಂದ ಅಲಂಕರಿಸಿದ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಇಡಲಾಯಿತು. ಇದಕ್ಕೂ ಮೊದಲು ಜಯದೇವ ಜಗದ್ಗುರುಗಳ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿ ತಂದು, ರಥದ ಸುತ್ತ ಪ್ರದಕ್ಷಿಣೆ ಮಾಡಿಸಿ ರಥಾರೋಹಣ ಮಾಡಲಾಯಿತು.</p>.<p>ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಿತು. ಈ ವೇಳೆ ನೆರೆದಿದ್ದ ಭಕ್ತರು ಕಳಶದತ್ತ ಬಾಳೆ ಹಣ್ಣು ತೂರಿದರು. ಉತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತ ವಿದ್ಯುದ್ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಎಲ್ಲೆಲ್ಲೂ ವಾದ್ಯಗಳ ಸದ್ದು ಕೇಳಿಬರುತ್ತಿತ್ತು. ಜತೆಗೆ ನಾದಸ್ವರ, ನಂದಿಕೋಲು ಇನ್ನಿತರ ಕಲಾ ತಂಡಗಳು ಮೇಳೈಸಿದ್ದವು.</p>.<p>ಭಕ್ತರು ಹಣ್ಣು, ಹೂವು, ತೆಂಗಿನಕಾಯಿಯೊಂದಿಗೆ ಆಗಮಿಸಿ ಶಿವಯೋಗಿ ಬಕ್ಕೇಶ್ವರರನ್ನು ಸ್ಮರಣೆ ಮಾಡಿ ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದರು. ಬೆಳಿಗ್ಗೆ ರುದ್ರಾಭಿಷೇಕ, ಹೋಳಿಗೆ ಎಡೆ ಕೊಡುವ ಸಂಪ್ರದಾಯ ಪಾಲಿಸಲಾಯಿತು.</p>.<p>ರಥೋತ್ಸವದ ವೇಳೆ ಹೆಬ್ಬಾಳು ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉದ್ಯಮಿಗಳಾದ ಎಸ್.ಎಸ್. ಗಣೇಶ್, ಎ.ಎಸ್. ವೀರಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>