ರಂಗಭೂಮಿಗೆ ಸ್ವಾಮೀಜಿ ಅವರು ನೀಡಿದ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆಗಳನ್ನು ಒಳಗೊಂಡಿದೆ. ಫೆ.26ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಸ್ವಾಮೀಜಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ದೆಹಲಿಯ ಕರ್ನಾಟಕ ಸಂಘ ತಿಳಿಸಿದೆ.