‘ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲಿಯೂ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡಬೇಕು. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯ ವರದಿ ಎರಡು ತಿಂಗಳಲ್ಲಿ ಬರಲಿದೆ. ವರದಿ ಬಂದ ತಕ್ಷಣವೇ ಮೀಸಲಾತಿ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಬಳಿಗೆ ನಿಯೋಗ ಒಯ್ಯಲಾಗುವುದು. ಸಮಾಜಕ್ಕೆ ಮೀಸಲಾತಿ ನೀಡದ ಹೊರತೂ ನಮಗೂ ಏನು ಬೇಡ ಎಂದು ಸ್ಪಷ್ಟಪಡಿಸುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಹೇಳಿದರು. ‘ಬಿಜೆಪಿ ಸರ್ಕಾರದಲ್ಲಿ ನಮ್ಮ ಸಮಾಜದಿಂದ ಮೂವರು ಸಚಿವರಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಆಶಯ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ನಾವೂ ಪ್ರಯತ್ನ ಮಾಡುತ್ತೇವೆ’ ಎಂದರು.