ದಾವಣಗೆರೆ: ಶ್ರೀರಾಮುಲು ಅವರದ್ದೇ ಸರ್ಕಾರ ಇದೆ. ಕುಂಬಳಕಾಯಿ ಹಾಗೂ ಕುಡುಗೋಲು ಎರಡೂ ಅವರ ಕೈಯಲ್ಲೇ ಇದೆ. ಹೀಗಾಗಿ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು. ನಾವೂ ನಿಮ್ಮ ಜೊತೆಗೆ ಬರುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಬೇಕಾಗಿತ್ತು. ಆದರೆ, ಈ ಕೆಲಸವನ್ನು ಮಾಡದೇ ಇರುವುದರಿಂದ ನಮ್ಮ ಸರ್ಕಾರಕ್ಕೆ ಸಮಾಜದವರು ತಕ್ಕ ಪಾಠ ಕಲಿಸಿದ್ದಾರೆ. ವಿಳಂಬ ಮಾಡಿದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ಹೀಗಾಗಿ ನ್ಯಾಯಸಮ್ಮತವಾಗಿ ಕೇಳುವ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.