‘ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ಸೌಂದರ್ಯ, ಪಾರಂಪರಿಕ ತಾಣಗಳು,ಜೀವವೈವಿಧ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ. ಇದನ್ನು ಕರುನಾಡಿನ ಪ್ರತಿಯೊಬ್ಬರೂ ನೋಡಲೇಬೇಕು. ಹೀಗಾಗಿ ನಮ್ಮ ವಿದ್ಯಾಸಂಸ್ಥೆಯಿಂದ ನವೆಂಬರ್ 2ರಂದು ವಸಂತ ಚಿತ್ರಮಂದಿರದ ಬೆಳಗಿನ 11ರಪ್ರದರ್ಶನದ ಟಿಕೆಟ್ ಕಾಯ್ದಿರಿಸಲಾಗಿದ್ದು, 750 ವಿದ್ಯಾರ್ಥಿಗಳಿಗೆ ಚಿತ್ರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.