<p><strong>ಬಸವಾಪಟ್ಟಣ</strong>: ಸಮೀಪದ ಮರಬನಹಳ್ಳಿಯಲ್ಲಿ ಆರು ಜನ ರೈತರಿಗೆ ಸೇರಿದ ಭತ್ತದ ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ಮೇವು ಸುಟ್ಟಿದೆ.</p>.<p>ಕಿಡಿಗೇಡಿಗಳು ಮಾರ್ಚ್ 15, 16 ಮತ್ತು 17ರಂದು ಮೂರು ದಿನಗಳು ರಾತ್ರಿ ಸಮಯದಲ್ಲಿ ಪ್ರತಿದಿನ ಇಬ್ಬರು ರೈತರ ಬಣವೆಗಳಿಗೆ ಬೆಂಕಿ ಹಚ್ಚಿದ್ದಾರೆ. ಶಂಭುಲಿಂಗಯ್ಯ, ಉಮಾಪತಿ, ಕೆ. ಬಿ. ಬಸವರಾಜಪ್ಪ, ಪಿ.ಬಸವರಾಜಪ್ಪ,ಎಚ್.ಎಸ್. ಹನುಮಂತಪ್ಪ ಮತ್ತು ಎಂ.ಜಿ. ಯೋಗೇಂದ್ರಪ್ಪ ಅವರಿಗೆ ಸೇರಿದ ಬಣವೆಗಳು ಸುಟ್ಟು ಭಸ್ಮವಾಗಿವೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ಹನುಮಂತಪ್ಪ ತಿಳಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ತೇಜಸ್ವಿ ಪಟೇಲ್ ಮೇವು ಕಳೆದುಕೊಂಡ ರೈತರಿಗೆ ಸಾಂತ್ವನ ಹೇಳಿ, ಕಿಡಿಗೇಡಿಗಳನ್ನುಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>20 ಟ್ರ್ಯಾಕ್ಟರ್ ಲೋಡ್ ಹುಲ್ಲು ಭಸ್ಮವಾಗಿದ್ದು, ಅಪಾರ ನಷ್ಟವಾಗಿದೆ. ಈಗ ಹಣ ಕೊಟ್ಟರೂ ಮೇವು ಸಿಗುತ್ತಿಲ್ಲ. ಪೊಲೀಸರು ಇದಕ್ಕೆ ಕಾರಣರಾದವರನ್ನು ಬಂಧಿಸಬೇಕು ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗಮ್ಮ ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಆರ್.ಐ. ವೇದಮೂರ್ತಿ, ವಿ.ಎ. ಕುಮಾರನಾಯ್ಕ್, ಪಿ.ಡಿ.ಒ. ಆನಂದನಾಯ್ಕ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ</strong>: ಸಮೀಪದ ಮರಬನಹಳ್ಳಿಯಲ್ಲಿ ಆರು ಜನ ರೈತರಿಗೆ ಸೇರಿದ ಭತ್ತದ ಹುಲ್ಲಿನ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ಮೇವು ಸುಟ್ಟಿದೆ.</p>.<p>ಕಿಡಿಗೇಡಿಗಳು ಮಾರ್ಚ್ 15, 16 ಮತ್ತು 17ರಂದು ಮೂರು ದಿನಗಳು ರಾತ್ರಿ ಸಮಯದಲ್ಲಿ ಪ್ರತಿದಿನ ಇಬ್ಬರು ರೈತರ ಬಣವೆಗಳಿಗೆ ಬೆಂಕಿ ಹಚ್ಚಿದ್ದಾರೆ. ಶಂಭುಲಿಂಗಯ್ಯ, ಉಮಾಪತಿ, ಕೆ. ಬಿ. ಬಸವರಾಜಪ್ಪ, ಪಿ.ಬಸವರಾಜಪ್ಪ,ಎಚ್.ಎಸ್. ಹನುಮಂತಪ್ಪ ಮತ್ತು ಎಂ.ಜಿ. ಯೋಗೇಂದ್ರಪ್ಪ ಅವರಿಗೆ ಸೇರಿದ ಬಣವೆಗಳು ಸುಟ್ಟು ಭಸ್ಮವಾಗಿವೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ಹನುಮಂತಪ್ಪ ತಿಳಿಸಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ತೇಜಸ್ವಿ ಪಟೇಲ್ ಮೇವು ಕಳೆದುಕೊಂಡ ರೈತರಿಗೆ ಸಾಂತ್ವನ ಹೇಳಿ, ಕಿಡಿಗೇಡಿಗಳನ್ನುಬಂಧಿಸಬೇಕು ಎಂದು ಒತ್ತಾಯಿಸಿದರು.</p>.<p>20 ಟ್ರ್ಯಾಕ್ಟರ್ ಲೋಡ್ ಹುಲ್ಲು ಭಸ್ಮವಾಗಿದ್ದು, ಅಪಾರ ನಷ್ಟವಾಗಿದೆ. ಈಗ ಹಣ ಕೊಟ್ಟರೂ ಮೇವು ಸಿಗುತ್ತಿಲ್ಲ. ಪೊಲೀಸರು ಇದಕ್ಕೆ ಕಾರಣರಾದವರನ್ನು ಬಂಧಿಸಬೇಕು ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗಮ್ಮ ಒತ್ತಾಯಿಸಿದ್ದಾರೆ.</p>.<p>ಸ್ಥಳಕ್ಕೆ ಆರ್.ಐ. ವೇದಮೂರ್ತಿ, ವಿ.ಎ. ಕುಮಾರನಾಯ್ಕ್, ಪಿ.ಡಿ.ಒ. ಆನಂದನಾಯ್ಕ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>