ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಾವಣಗೆರೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ಈಗಲಾದರೂ ಅದರ ಬಗ್ಗೆ ಜನರಿಗೆ, ಜನಪ್ರತಿನಿಧಿಗಳಿಗೆ ಅರಿವು ಮೂಡಿದ್ದು ಸ್ವಾಗತಾರ್ಹ. ವೈದ್ಯಕೀಯ ಕಾಲೇಜಿನ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಸಿ.ಜಿ. ಆಸ್ಪತ್ರೆಗೆ ಜಾಗ ನೀಡಿದ ಮನೆತನದವರನ್ನೂ ಸ್ಮರಿಸಬೇಕು. ಕಾರ್ಮಿಕ ಕಾಲೇಜು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಈ ಬಗ್ಗೆ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.