<p><strong>ದಾವಣಗೆರೆ</strong>: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಹಯೋಗದಲ್ಲಿ ರಾಜ್ಯಮಟ್ಟದ ರ್ಯಾಂಕಿಂಗ್ ಟೂರ್ನಮೆಂಟ್ ಭಾನುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.</p>.<p>ಶಾಸಕ ಎಸ್.ಎ. ರವೀಂದ್ರನಾಥ್ ಟೂರ್ನಮೆಂಟ್ಗೆ ಚಾಲನೆ ನೀಡಿ ಮಾತನಾಡಿ, ‘ಇಂಥ ಕ್ರೀಡಾಕೂಟಗಳನ್ನು ಆಯೋಜಿಸಿದಾಗ ದಾವಣಗೆರೆ ಪ್ರಸಿದ್ಧಿ ಪಡೆಯುತ್ತದೆ. ರಾಷ್ಟ್ರಮಟ್ಟದ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಅದಕ್ಕೂ ಪೂರ್ಣ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ‘ರಾಜ್ಯ, ರಾಷ್ಟ್ರಮಟ್ಟದ ಪಂದ್ಯಗಳನ್ನು ಆಯೋಜಿಸಿದಾಗ ಸ್ಥಳೀಯ ಮಕ್ಕಳಿಗೆ ಅನುಕೂಲವಾಗುತ್ತದೆ. ಉತ್ತಮ ರ್ಯಾಂಕಿಂಗ್ ಹೊಂದಿರುವ ಕ್ರೀಡಾಪಟುಗಳ ಆಟ ಇಲ್ಲೇ ನೋಡಲು ಸಾಧ್ಯವಾಗುತ್ತದೆ. ಇದು ಇಲ್ಲಿನ ಮಕ್ಕಳ ಆಟದ ಗುಣಮಟ್ಟ<br />ಹೆಚ್ಚಿಸಲು ಉಪಯೋಗಕಾರಿ’ ಎಂದು ಹೇಳಿದರು.</p>.<p>ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಎನ್. ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಿ.ಆರ್. ಗಿರಿರಾಜ್, ಖಜಾಂಚಿ ಇಸ್ಮಾಯಿಲ್ ಎಂ., ನಿರ್ದೇಶಕರಾದ ಸುರೇಶ್ ಗಂಡ್ಗಾಳೆ, ಜಯಪ್ರಕಾಶ್ ಆರ್., ಮಲ್ಲಿಕಾರ್ಜುನ್ ಕೋಟೆಹಾಳ್, ಸುಗಂಧಾ<br />ಗಂಗಾಧರ್ ಪಾಲಿಕೆ ಸದಸ್ಯರಾದ<br />ಶಿಲ್ಪಾ ಜಯಪ್ರಕಾಶ್, ರೇಖಾ ಸುರೇಶ್ ಗಂಡ್ಗಾಳೆ ಉಪಸ್ಥಿತರಿದ್ದರು.</p>.<p>ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧೆಯಲ್ಲಿ ಒಟ್ಟು 653 ಸ್ಪರ್ಧಿಗಳು ಭಾಗವಹಿಸಿದ್ದಾರೆ. 15 ವರ್ಷ, 17 ವರ್ಷದೊಳ ಬಾಲಕರ ವಿಭಾಗ, ಬಾಲಕಿಯರ ವಿಭಾಗ ಮಿಕ್ಸೆಡ್ ಸ್ಪರ್ಧೆಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಸಹಯೋಗದಲ್ಲಿ ರಾಜ್ಯಮಟ್ಟದ ರ್ಯಾಂಕಿಂಗ್ ಟೂರ್ನಮೆಂಟ್ ಭಾನುವಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಆರಂಭಗೊಂಡಿತು.</p>.<p>ಶಾಸಕ ಎಸ್.ಎ. ರವೀಂದ್ರನಾಥ್ ಟೂರ್ನಮೆಂಟ್ಗೆ ಚಾಲನೆ ನೀಡಿ ಮಾತನಾಡಿ, ‘ಇಂಥ ಕ್ರೀಡಾಕೂಟಗಳನ್ನು ಆಯೋಜಿಸಿದಾಗ ದಾವಣಗೆರೆ ಪ್ರಸಿದ್ಧಿ ಪಡೆಯುತ್ತದೆ. ರಾಷ್ಟ್ರಮಟ್ಟದ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಅದಕ್ಕೂ ಪೂರ್ಣ ಸಹಕಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ‘ರಾಜ್ಯ, ರಾಷ್ಟ್ರಮಟ್ಟದ ಪಂದ್ಯಗಳನ್ನು ಆಯೋಜಿಸಿದಾಗ ಸ್ಥಳೀಯ ಮಕ್ಕಳಿಗೆ ಅನುಕೂಲವಾಗುತ್ತದೆ. ಉತ್ತಮ ರ್ಯಾಂಕಿಂಗ್ ಹೊಂದಿರುವ ಕ್ರೀಡಾಪಟುಗಳ ಆಟ ಇಲ್ಲೇ ನೋಡಲು ಸಾಧ್ಯವಾಗುತ್ತದೆ. ಇದು ಇಲ್ಲಿನ ಮಕ್ಕಳ ಆಟದ ಗುಣಮಟ್ಟ<br />ಹೆಚ್ಚಿಸಲು ಉಪಯೋಗಕಾರಿ’ ಎಂದು ಹೇಳಿದರು.</p>.<p>ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಎನ್. ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಿ.ಆರ್. ಗಿರಿರಾಜ್, ಖಜಾಂಚಿ ಇಸ್ಮಾಯಿಲ್ ಎಂ., ನಿರ್ದೇಶಕರಾದ ಸುರೇಶ್ ಗಂಡ್ಗಾಳೆ, ಜಯಪ್ರಕಾಶ್ ಆರ್., ಮಲ್ಲಿಕಾರ್ಜುನ್ ಕೋಟೆಹಾಳ್, ಸುಗಂಧಾ<br />ಗಂಗಾಧರ್ ಪಾಲಿಕೆ ಸದಸ್ಯರಾದ<br />ಶಿಲ್ಪಾ ಜಯಪ್ರಕಾಶ್, ರೇಖಾ ಸುರೇಶ್ ಗಂಡ್ಗಾಳೆ ಉಪಸ್ಥಿತರಿದ್ದರು.</p>.<p>ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧೆಯಲ್ಲಿ ಒಟ್ಟು 653 ಸ್ಪರ್ಧಿಗಳು ಭಾಗವಹಿಸಿದ್ದಾರೆ. 15 ವರ್ಷ, 17 ವರ್ಷದೊಳ ಬಾಲಕರ ವಿಭಾಗ, ಬಾಲಕಿಯರ ವಿಭಾಗ ಮಿಕ್ಸೆಡ್ ಸ್ಪರ್ಧೆಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>