<p><strong>ದಾವಣಗೆರೆ</strong>: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 7ನೇ ರಾಜ್ಯಮಟ್ಟದ ಜೂನಿಯರ್ ನೆಟ್ಬಾಲ್ ಟೂರ್ನಿಯ ಬಾಲಕಿಯರ ವಿಭಾಗದಲ್ಲಿ ಹಾಸನ ಹಾಗೂ ಬಾಲಕರ ವಿಭಾಗದಲ್ಲಿ ಬೆಂಗಳೂರು ನಗರ ತಂಡಗಳು ಜಯಗಳಿಸಿದವು.</p>.<p>ದಾವಣಗೆರೆ ನೆಟ್ಬಾಲ್ ಅಸೋಸಿಯೇಷನ್ ಹಾಗೂ ಅಮೆಚೂರ್ ನೆಟ್ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಎರಡು ದಿನ ಆಯೋಜಿಸಿದ್ದ ಟೂರ್ನಿಯಲ್ಲಿ ರಾಜ್ಯದ ವಿವಿಧೆಡೆಯ ತಂಡಗಳು ಪಾಲ್ಗೊಂಡಿದ್ದವು.</p>.<p>ಬಾಲಕಿಯರ ವಿಭಾಗದಲ್ಲಿ ಹಾಸನ ಮತ್ತು ದಾವಣಗೆರೆ ತಂಡಗಳ ನಡುವೆ ನಡೆದ ಫೈನಲ್ನಲ್ಲಿ ಹಾಸನ ತಂಡವು 27–20 ಅಂತರದಿಂದ ಗೆಲುವು ದಾಖಲಿಸಿತು. ದಾವಣಗೆರೆ ತಂಡ ದ್ವಿತೀಯ ಹಾಗೂ ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ತಂಡಗಳು ತೃತೀಯ ಸ್ಥಾನ ಪಡೆದವು.</p>.<p>ಬಾಲಕರ ವಿಭಾಗದಲ್ಲಿ ಬೆಂಗಳೂರು ನಗರ ಹಾಗೂ ಚಾಮರಾಜನಗರ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. 31–30ರ ಅಂತರದಲ್ಲಿ ಬೆಂಗಳೂರು ತಂಡವು ಚಾಮರಾಜನಗರ ತಂಡವನ್ನು ಮಣಿಸಿತು. ಚಾಮರಾಜನಗರ ದ್ವಿತೀಯ ಹಾಗೂ ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ತಂಡಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.</p>.<p>ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು ಬಹುಮಾನ ವಿತರಿಸಿದರು. ಮಾರ್ಚ್24 ರಿಂದ 27ರವರೆಗೆ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ನೆಟ್ಬಾಲ್ ಟೂರ್ನಿಯಲ್ಲಿ ರಾಜ್ಯ ತಂಡಗಳು ಭಾಗವಹಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 7ನೇ ರಾಜ್ಯಮಟ್ಟದ ಜೂನಿಯರ್ ನೆಟ್ಬಾಲ್ ಟೂರ್ನಿಯ ಬಾಲಕಿಯರ ವಿಭಾಗದಲ್ಲಿ ಹಾಸನ ಹಾಗೂ ಬಾಲಕರ ವಿಭಾಗದಲ್ಲಿ ಬೆಂಗಳೂರು ನಗರ ತಂಡಗಳು ಜಯಗಳಿಸಿದವು.</p>.<p>ದಾವಣಗೆರೆ ನೆಟ್ಬಾಲ್ ಅಸೋಸಿಯೇಷನ್ ಹಾಗೂ ಅಮೆಚೂರ್ ನೆಟ್ಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಎರಡು ದಿನ ಆಯೋಜಿಸಿದ್ದ ಟೂರ್ನಿಯಲ್ಲಿ ರಾಜ್ಯದ ವಿವಿಧೆಡೆಯ ತಂಡಗಳು ಪಾಲ್ಗೊಂಡಿದ್ದವು.</p>.<p>ಬಾಲಕಿಯರ ವಿಭಾಗದಲ್ಲಿ ಹಾಸನ ಮತ್ತು ದಾವಣಗೆರೆ ತಂಡಗಳ ನಡುವೆ ನಡೆದ ಫೈನಲ್ನಲ್ಲಿ ಹಾಸನ ತಂಡವು 27–20 ಅಂತರದಿಂದ ಗೆಲುವು ದಾಖಲಿಸಿತು. ದಾವಣಗೆರೆ ತಂಡ ದ್ವಿತೀಯ ಹಾಗೂ ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ತಂಡಗಳು ತೃತೀಯ ಸ್ಥಾನ ಪಡೆದವು.</p>.<p>ಬಾಲಕರ ವಿಭಾಗದಲ್ಲಿ ಬೆಂಗಳೂರು ನಗರ ಹಾಗೂ ಚಾಮರಾಜನಗರ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. 31–30ರ ಅಂತರದಲ್ಲಿ ಬೆಂಗಳೂರು ತಂಡವು ಚಾಮರಾಜನಗರ ತಂಡವನ್ನು ಮಣಿಸಿತು. ಚಾಮರಾಜನಗರ ದ್ವಿತೀಯ ಹಾಗೂ ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ತಂಡಗಳು ತೃತೀಯ ಸ್ಥಾನವನ್ನು ಹಂಚಿಕೊಂಡವು.</p>.<p>ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್ ಅವರು ಬಹುಮಾನ ವಿತರಿಸಿದರು. ಮಾರ್ಚ್24 ರಿಂದ 27ರವರೆಗೆ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ನೆಟ್ಬಾಲ್ ಟೂರ್ನಿಯಲ್ಲಿ ರಾಜ್ಯ ತಂಡಗಳು ಭಾಗವಹಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>