ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿರುವ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರ (ಡಯಟ್) ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಕಾಡೆಮಿಯಿಂದ ದಾವಣಗೆರೆಯಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಕಾಸರಗೋಡಿನ ಕಲಾವಿದರಾದ ಪಿ.ಎಸ್. ಪುಂಚಿತ್ತಾಯ, ಕಲಬುರ್ಗಿಯ ಪ್ರೊ. ವಿ.ಜಿ. ಅಂದಾನಿ, ರಾಯಚೂರಿನ ಎಚ್.ಎಚ್. ಮ್ಯಾದಾರ್, ಧಾರವಾಡದ ಎನ್.ಆರ್. ನಾಯ್ಕರ್, ತುಮಕೂರಿನ ಪ್ರಭು ಹರಸೂರು ಹಾಗೂ ಮೈಸೂರಿನ ಹರಿ ಅವರಿಗೆ ಫೆಲೊಶಿಪ್ ಪ್ರದಾನ ಮಾಡಲಾಗುವುದು. ಫೆಲೊಶಿಫ್ ₹ 2 ಲಕ್ಷ ನಗದು ಪುರಸ್ಕಾರ ಹಾಗೂ ಫಲಕ ಒಳಗೊಂಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.