ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ಇಂದಿನಿಂದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

Last Updated 10 ಜನವರಿ 2022, 5:31 IST
ಅಕ್ಷರ ಗಾತ್ರ

ಹರಿಹರ: ಕನಕದಾಸರ 534ನೇ ಜಯಂತಿ ಅಂಗವಾಗಿ ಹರಿಹರ ಕುಸ್ತಿ ಜೀರ್ಣೋದ್ಧಾರ ಸಮಿತಿ ಮತ್ತು ಕರ್ನಾಟಕ ರಾಜ್ಯ ಕುಸ್ತಿ ಸಂಘದಿಂದ ಜ.10ರಿಂದ 12ರ ವರೆಗೆ ನಗರದ ತಾಲ್ಲೂಕು ಕ್ರೀಡಾಂಗಣ (ಗಾಂಧಿ ಮೈದಾನ)ದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ.

ಬಾಲಕ, ಬಾಲಕಿಯರು, ಮಹಿಳೆ ಮತ್ತು ಪುರುಷ ವಿಭಾಗದಲ್ಲಿ ಕುಸ್ತಿ ಪಂದ್ಯಾವಳಿ ನಡೆಯುತ್ತಿದೆ. ರಾಜ್ಯದ ಪ್ರತಿಷ್ಠಿತ ಪೈಲ್ವಾನರು ಸೇರಿ 150 ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆ ಇದೆ. ರಾಷ್ಟ್ರ ಮಟ್ಟದ ಪಂದ್ಯಾವಳಿ ನಿಯಮಾವಳಿಯಂತೆಕುಸ್ತಿ ಅಖಾಡವನ್ನು 4 ಅಡಿ ಎತ್ತರದವರೆಗೆ ಆಕರ್ಷಕವಾಗಿ ನಿರ್ಮಿಸಲಾಗಿದೆ. ಪ್ರೇಕ್ಷಕರು ಅಖಾಡಕ್ಕೆ ನುಗ್ಗದಂತೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿದೆ.

ಮುಂದಿನ ಐದು ವರ್ಷಗಳ ಕಾಲ ಸತತವಾಗಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸುವ, ಸೂಕ್ತ ಜಾಗದಲ್ಲಿ ಆಧುನಿಕ ಕುಸ್ತಿ ತರಬೇತಿ ಸಂಸ್ಥೆ ನಿರ್ಮಿಸುವ ಯೋಚನೆ ಇದೆ. ಪಂದ್ಯಾವಳಿಯನ್ನು ಕೋವಿಡ್ ನಿಯಮಾನುಸಾರ ನಡೆಸಲಾಗುವುದು ಎಂದು ಕುಸ್ತಿ ಜೀಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT