‘ಬೀದರ್ನಲ್ಲಿ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇದೆ. ಸಮುದ್ರದ ಮೀನುಗಾರಿಕೆ ಇರುವುದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ. ಒಳನಾಡಿನ ಮೀನುಗಾರಿಕೆ ದೊಡ್ಡಮಟ್ಟದಲ್ಲಿ ಇಲ್ಲ. ಹಾಗಾಗಿ ಆ ವಿಶ್ವವಿದ್ಯಾಲಯದಿಂದ ಮೀನುಗಾರಿಕೆಯನ್ನು ಪ್ರತ್ಯೇಕಿಸಿ ಮಂಗಳೂರಿನಲ್ಲಿ ಮಾಡಬೇಕು ಎಂಬ ಪ್ರಸ್ತಾವ ಇದೆ. ಅದಕ್ಕೆ ₹ 1200 ಕೋಟಿ ನೀಡಬೇಕು ಎಂದು ಹಿಂದಿನ ಮುಖ್ಯಮಂತ್ರಿಯವರಲ್ಲಿಯೂ ತಿಳಿಸಿದ್ದೆ. ಈಗಿನ ಮುಖ್ಯಮಂತ್ರಿಯವರಿಗೂ ಪ್ರಸ್ತಾವ ಸಲ್ಲಿಸಿದ್ದೇನೆ’ ಎಂದು ಹೇಳಿದರು.