ಗ್ರಾಮದ ರತ್ನಮ್ಮ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತಿಂಗಳ ಹಿಂದೆ ಮೆಕ್ಕೆಜೋಳ ಬಿತ್ತನೆ ಮಾಡಿದ್ರು. ಬೆಳೆ ಚೆನ್ನಾಗಿತ್ತು. ಅವರ ಸಹೋದರ ಶೇಖರಪ್ಪ ಅವರು ಮೆಕ್ಕೆಜೋಳ ಬೆಳೆಗೆ ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ರತ್ನಮ್ಮ ಅವರು ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.