<p><strong>ಹರಪನಹಳ್ಳಿ:</strong> ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಭಾನುವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯಿತು.</p>.<p>ಬಿರುಗಾಳಿಗೆ ಹರಿಹರ ರಸ್ತೆಯಲ್ಲಿನ ಮರಗಳು ಧರೆಗುರುಳಿದ್ದು, ಆಶ್ರಯ ಮನೆಗಳ ತಗಡಿನ ಶೀಟ್ಗಳು ಹಾರಿಹೋಗಿವೆ.</p>.<p>ಸಾರಿಗೆ ಘಟಕದ ಸಮೀಪದಲ್ಲಿ ಬೃಹತ್ ಮರವೊಂದು ಬಿದ್ದಿದ್ದು, ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿ– 25ರಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಹಿರೆಕೆರೆಯಿಂದ ಅನಂತನಹಳ್ಳಿವರೆಗೂ ದೊಡ್ಡ ಮರಗಳು ನೆಲಕ್ಕುರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ರಸ್ತೆಯ ಅಕ್ಕಪಕ್ಕದಲ್ಲಿದ್ದ ಗೂಡಂಗಡಿಗಳ ತಗಡಿನ ಶೀಟ್ಗಳು ಹಾರಿಹೋಗಿವೆ.</p>.<p>ಅಂಗಡಿಯಲ್ಲಿದ್ದ ಸಾಮಗ್ರಿಗಳು ಹಾಳಾಗಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಧರೆಗುರುಳಿದ ಮರ ಕಡಿದು ತೆರವುಗೊಳಿಸುವವರೆಗೂ ವಾಹನಗಳು ಅಲ್ಲಿಯೇ ನಿಲ್ಲುವಂತಾಯಿತು. ಇದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಅನಂತನಹಳ್ಳಿಯ ಪ್ರಗತಿಪರ ರೈತ ವಿರೂಪಾಕ್ಷಪ್ಪ ಅವರ ತೋಟದಲ್ಲಿ ಉತ್ತಮವಾಗಿ ಕಾಯಿಕಟ್ಟಿದ್ದ ಮಾವಿನಕಾಯಿಗಳು ಆಲಿಕಲ್ಲು ಮಳೆಗೆ ಹಾನಿಯಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ ಎಂದು ಅವರು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಪಟ್ಟಣ ಸೇರಿ ತಾಲ್ಲೂಕಿನಾದ್ಯಂತ ಭಾನುವಾರ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯಿತು.</p>.<p>ಬಿರುಗಾಳಿಗೆ ಹರಿಹರ ರಸ್ತೆಯಲ್ಲಿನ ಮರಗಳು ಧರೆಗುರುಳಿದ್ದು, ಆಶ್ರಯ ಮನೆಗಳ ತಗಡಿನ ಶೀಟ್ಗಳು ಹಾರಿಹೋಗಿವೆ.</p>.<p>ಸಾರಿಗೆ ಘಟಕದ ಸಮೀಪದಲ್ಲಿ ಬೃಹತ್ ಮರವೊಂದು ಬಿದ್ದಿದ್ದು, ಶಿವಮೊಗ್ಗ-ಹೊಸಪೇಟೆ ರಾಜ್ಯ ಹೆದ್ದಾರಿ– 25ರಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಹಿರೆಕೆರೆಯಿಂದ ಅನಂತನಹಳ್ಳಿವರೆಗೂ ದೊಡ್ಡ ಮರಗಳು ನೆಲಕ್ಕುರುಳಿವೆ. ಯಾವುದೇ ಪ್ರಾಣಹಾನಿಯಾಗಿಲ್ಲ. ರಸ್ತೆಯ ಅಕ್ಕಪಕ್ಕದಲ್ಲಿದ್ದ ಗೂಡಂಗಡಿಗಳ ತಗಡಿನ ಶೀಟ್ಗಳು ಹಾರಿಹೋಗಿವೆ.</p>.<p>ಅಂಗಡಿಯಲ್ಲಿದ್ದ ಸಾಮಗ್ರಿಗಳು ಹಾಳಾಗಿದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ. ಸ್ಥಳೀಯರು ಮತ್ತು ಪುರಸಭೆ ಸಿಬ್ಬಂದಿ ಧರೆಗುರುಳಿದ ಮರ ಕಡಿದು ತೆರವುಗೊಳಿಸುವವರೆಗೂ ವಾಹನಗಳು ಅಲ್ಲಿಯೇ ನಿಲ್ಲುವಂತಾಯಿತು. ಇದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.</p>.<p>ಅನಂತನಹಳ್ಳಿಯ ಪ್ರಗತಿಪರ ರೈತ ವಿರೂಪಾಕ್ಷಪ್ಪ ಅವರ ತೋಟದಲ್ಲಿ ಉತ್ತಮವಾಗಿ ಕಾಯಿಕಟ್ಟಿದ್ದ ಮಾವಿನಕಾಯಿಗಳು ಆಲಿಕಲ್ಲು ಮಳೆಗೆ ಹಾನಿಯಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ ಎಂದು ಅವರು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>