ತಲಾಂ ಶೇಖ್ ತರಗಾರ ಕೆಲಸ ಮಾಡುವವರಾಗಿದ್ದು, ಬಾಡಿಗೆ ಮನೆಯಲ್ಲಿದ್ದಾರೆ. ಈಗ ಕೂಲಿ ಕೆಲಸವೂ ಇಲ್ಲದೇ ಬಾಡಿಗೆ ಕಟ್ಟಲೂ ಆಗದ ಪರಿಸ್ಥಿತಿಯಲ್ಲಿದ್ದಾರೆ. ಇಂಥ ಸಮಯದಲ್ಲಿ ಮಗುವಿಗೆ ನಾಯಿ ಕಚ್ಚಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬಿಲ್ ಕಟ್ಟಲೂ ಹಣ ಇಲ್ಲದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಟಿ. ಜಪ್ಪು, ಉಬೇದುಲ್ಲಾ ತಿಳಿಸಿದ್ದಾರೆ.