<p><strong>ಹರಿಹರ:</strong> ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ಮುಂದಾಗಿರುವ ನಗರಸಭೆ, ಅವುಗಳ ಸಂತಾನಶಕ್ತಿ ಹರಣ ಚಿಕಿತ್ಸೆಗಾಗಿ ₹20 ಲಕ್ಷ ಮೊತ್ತದ ಟೆಂಡರ್ ಕರೆದಿದೆ. </p>.<p>ವಾಯು ವಿಹಾರಿಗಳು, ಬಸ್, ರೈಲು ನಿಲ್ದಾಣದಿಂದ ರಾತ್ರಿ ಸಮಯದಲ್ಲಿ ಮನೆಗೆ ತಲುಪುವವರು, ಶಾಲೆ, ಮನೆಪಾಠಕ್ಕೆ ಹೋಗುವ ವಿದ್ಯಾರ್ಥಿಗಳು ನಾಯಿ ಕಡಿತಕ್ಕೆ ಒಳಗಾದ ಹತ್ತಾರು ಪ್ರಕರಣಗಳು ನಡೆದಿದ್ದು, ಜನರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರಸಭೆಯು ಬೀದಿ ನಾಯಿಗಳ ಹಾವಳಿಗೆ ಅಂಕುಶ ಹಾಕಲು ಮುಂದಾಗಿದೆ.</p>.<p>ನಗರದ ಒಳ ಭಾಗದಲ್ಲಷ್ಟೇ ಅಲ್ಲದೆ, ಹೊರಭಾಗದ ಬಡಾವಣೆಗಳಲ್ಲೂ ಬೀದಿನಾಯಿಗಳು ಹಿಂಡುಹಿಂಡಾಗಿ ಸಂಚರಿಸುತ್ತ ಪಾದಚಾರಿಗಳ ಮೇಲೆ ಎರಗುತ್ತಿವೆ. ನಾಯಿಗಳ ಕಾಟ ಹೆಚ್ಚಿದ್ದರಿಂದ ಬಸ್, ರೈಲು ನಿಲ್ದಾಣದ ಸಮೀಪದಲ್ಲಿದ್ದವರೂ ಆಟೊ ಹಿಡಿದೇ ಮನೆಗೆ ತಲುಪುವುದು ಅನಿವಾರ್ಯವಾಗಿದೆ.</p>.<p>ಆ.21 ರಂದು ಪ್ರಶಾಂತ ನಗರದ ಬಾಲಕನೊಬ್ಬ ನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಚರಂಡಿಗೆ ಬಿದ್ದು ಮೂಗಿನ ಮೂಳೆ ಮುರಿತ ಹಾಗೂ ಇತರೆಡೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.</p>.<p>ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಈಚೆಗೆ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳೂ ಈ ಬಗ್ಗೆ ದನಿ ಎತ್ತಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ಮುಂದಾಗಿರುವ ನಗರಸಭೆ, ಅವುಗಳ ಸಂತಾನಶಕ್ತಿ ಹರಣ ಚಿಕಿತ್ಸೆಗಾಗಿ ₹20 ಲಕ್ಷ ಮೊತ್ತದ ಟೆಂಡರ್ ಕರೆದಿದೆ. </p>.<p>ವಾಯು ವಿಹಾರಿಗಳು, ಬಸ್, ರೈಲು ನಿಲ್ದಾಣದಿಂದ ರಾತ್ರಿ ಸಮಯದಲ್ಲಿ ಮನೆಗೆ ತಲುಪುವವರು, ಶಾಲೆ, ಮನೆಪಾಠಕ್ಕೆ ಹೋಗುವ ವಿದ್ಯಾರ್ಥಿಗಳು ನಾಯಿ ಕಡಿತಕ್ಕೆ ಒಳಗಾದ ಹತ್ತಾರು ಪ್ರಕರಣಗಳು ನಡೆದಿದ್ದು, ಜನರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಗರಸಭೆಯು ಬೀದಿ ನಾಯಿಗಳ ಹಾವಳಿಗೆ ಅಂಕುಶ ಹಾಕಲು ಮುಂದಾಗಿದೆ.</p>.<p>ನಗರದ ಒಳ ಭಾಗದಲ್ಲಷ್ಟೇ ಅಲ್ಲದೆ, ಹೊರಭಾಗದ ಬಡಾವಣೆಗಳಲ್ಲೂ ಬೀದಿನಾಯಿಗಳು ಹಿಂಡುಹಿಂಡಾಗಿ ಸಂಚರಿಸುತ್ತ ಪಾದಚಾರಿಗಳ ಮೇಲೆ ಎರಗುತ್ತಿವೆ. ನಾಯಿಗಳ ಕಾಟ ಹೆಚ್ಚಿದ್ದರಿಂದ ಬಸ್, ರೈಲು ನಿಲ್ದಾಣದ ಸಮೀಪದಲ್ಲಿದ್ದವರೂ ಆಟೊ ಹಿಡಿದೇ ಮನೆಗೆ ತಲುಪುವುದು ಅನಿವಾರ್ಯವಾಗಿದೆ.</p>.<p>ಆ.21 ರಂದು ಪ್ರಶಾಂತ ನಗರದ ಬಾಲಕನೊಬ್ಬ ನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಚರಂಡಿಗೆ ಬಿದ್ದು ಮೂಗಿನ ಮೂಳೆ ಮುರಿತ ಹಾಗೂ ಇತರೆಡೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.</p>.<p>ಪ್ರವೀಣ್ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ಈಚೆಗೆ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳೂ ಈ ಬಗ್ಗೆ ದನಿ ಎತ್ತಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>