ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್, ‘ಕೆನರಾ ಬ್ಯಾಂಕಿನ ಸಮಾಜ ಸೇವೆ ಅನುಕರಣೀಯ. ಸಾರ್ವಜನಿಕರಿಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವೀಲ್ಚೇರ್ಸ್, ಸ್ಟ್ರೆಚರ್, ಪಲ್ಸ್ ಆಕ್ಸಿಮೀಟರ್ ಮುಂತಾದ ಸಲಕರಣೆಗಳನ್ನು ಕೆನರಾ ಬ್ಯಾಂಕ್ ನೀಡಿದೆ. ಇದು ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ನೆರವಾಗಲಿದೆ. ಹಾಗೆಯೇ ಕೆನರಾ ಬ್ಯಾಂಕ್ ಕೊರೊನಾ ಸಂತ್ರಸ್ತರಿಗೆ, ಪರಿಚಾರಕರಿಗೆ, ವಾರಿಯರ್ಗಳಿಗೆ ಆಹಾರ ಸೇವೆಯನ್ನೂ ಒದಗಿಸಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.