<p><strong>ದಾವಣಗೆರೆ:</strong> ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಲಾಕ್ಡೌನ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.</p>.<p>ನಗರದಲ್ಲಿ ಕಾರಣವಿಲ್ಲದೇ ಅಡ್ಡಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಸಕಾರಣದಿಂದ ರಸ್ತೆಗಿಳಿಯುವವರಿಗೆ ತೊಂದರೆ ಕೊಡಬೇಡಿ ಎಂದು ಸೂಚಿಸಿದರು.</p>.<p>ಹೋಂ ಐಸೋಲೇಷನ್ನಲ್ಲಿರುವವರು ಮನೆಯಿಂದ ಹೊರಬಾರದಂತೆ ನಿಗಾ ವಹಿಸಬೇಕು. ಅವರ ಮನೆಯ ಮುಂದೆ ಒಂದು ಚಾರ್ಟ್ ಅಂಟಿಸಿ ಅಲ್ಲಿಗೆ ಭೇಟಿ ನೀಡುವ ಆಶಾಕಾರ್ಯಕರ್ತೆಯರು ಹಾಗೂ ವೈದ್ಯರು ಅದರ ಮೇಲೆ ಸಹಿ ಮಾಡಿಬರಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲೆಗೆ ಅಗತ್ಯ ಇರುವಷ್ಟು ರೆಮ್ಡಿಸಿವಿರ್ ದಾಸ್ತಾನು ಇದೆ. ಅಗತ್ಯ ಇರುವವರಿಗೆ ಬಳಸಲಾಗುತ್ತದೆ. ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಾಗಿರುವುದರಿಂದ ಪೂರೈಕೆಯಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.</p>.<p>ಸಿಜಿ ಆಸ್ಪತ್ರೆ ಬಳಿ ಆಕ್ಸಿಜನ್ ಘಟಕ ನಿರ್ಮಾಣ ಮಾಡಿರುವುದರಿಂದ ನಮಗೆ ಈಗ ಯಾವುದೇ ತೊಂದರೆ ಇಲ್ಲ. ಕೆಲವರು ಕೃತಕ ಕೊರತೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಾಜಿ ಮೇಯರ್ ಬಿ.ಜಿ. ಅಜಯ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಲಾಕ್ಡೌನ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯನ್ನಾಗಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.</p>.<p>ನಗರದಲ್ಲಿ ಕಾರಣವಿಲ್ಲದೇ ಅಡ್ಡಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಸಕಾರಣದಿಂದ ರಸ್ತೆಗಿಳಿಯುವವರಿಗೆ ತೊಂದರೆ ಕೊಡಬೇಡಿ ಎಂದು ಸೂಚಿಸಿದರು.</p>.<p>ಹೋಂ ಐಸೋಲೇಷನ್ನಲ್ಲಿರುವವರು ಮನೆಯಿಂದ ಹೊರಬಾರದಂತೆ ನಿಗಾ ವಹಿಸಬೇಕು. ಅವರ ಮನೆಯ ಮುಂದೆ ಒಂದು ಚಾರ್ಟ್ ಅಂಟಿಸಿ ಅಲ್ಲಿಗೆ ಭೇಟಿ ನೀಡುವ ಆಶಾಕಾರ್ಯಕರ್ತೆಯರು ಹಾಗೂ ವೈದ್ಯರು ಅದರ ಮೇಲೆ ಸಹಿ ಮಾಡಿಬರಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲೆಗೆ ಅಗತ್ಯ ಇರುವಷ್ಟು ರೆಮ್ಡಿಸಿವಿರ್ ದಾಸ್ತಾನು ಇದೆ. ಅಗತ್ಯ ಇರುವವರಿಗೆ ಬಳಸಲಾಗುತ್ತದೆ. ಕೋವಿಡ್ ಲಸಿಕೆಗೆ ಬೇಡಿಕೆ ಹೆಚ್ಚಾಗಿರುವುದರಿಂದ ಪೂರೈಕೆಯಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.</p>.<p>ಸಿಜಿ ಆಸ್ಪತ್ರೆ ಬಳಿ ಆಕ್ಸಿಜನ್ ಘಟಕ ನಿರ್ಮಾಣ ಮಾಡಿರುವುದರಿಂದ ನಮಗೆ ಈಗ ಯಾವುದೇ ತೊಂದರೆ ಇಲ್ಲ. ಕೆಲವರು ಕೃತಕ ಕೊರತೆ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಾಜಿ ಮೇಯರ್ ಬಿ.ಜಿ. ಅಜಯ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>