ಬಸವಾಪಟ್ಟಣ: ಇಲ್ಲಿನ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ (16) ಬುಧವಾರ ಮಧ್ಯಾಹ್ನ ಇಲ್ಲಿನ ಭದ್ರಾ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಹೊನ್ನಾಳಿ ತಾಲ್ಲೂಕು ನೇರಲಗುಂಡಿ ಗ್ರಾಮದ ತಿಮ್ಮಪ್ಪ ಅವರ ಪುತ್ರ ಮಣಿಕಂಠ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಭದ್ರಾ ನಾಲೆಗೆ ಸ್ನಾನಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದಿದ್ದಾನೆ. ಸಮೀಪದ ಹರೋಸಾಗರದ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ.