<p><strong>ಹರಿಹರ</strong>: ನಗರದ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ರೈಲು ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿಯ ಸತ್ಯವಾಣಿ ನಗರದ ನಿವಾಸಿ, ಮೈಸೂರಿನ ಜೆಎಸ್ಎಸ್ ಕಾಲೇಜಿನ 2ನೇ ವರ್ಷದ ಎಂಬಿಎ ವಿದ್ಯಾರ್ಥಿನಿ ಶ್ರಾವಣಿ (24) ಮೃತಪಟ್ಟವರು.</p>.<p>ಶ್ರಾವಣಿಯ ತಂದೆ ಬಾಬು ಎಸ್.ಜಿ. ಅವರ ಚಿಕ್ಕಪ್ಪ ಸತ್ಯನಾರಾಯಣರಾವ್ ಅವರು ಹರಿಹರದಲ್ಲಿ ವಾಸವಿದ್ದಾರೆ. ಅವರ ಮನೆಯಲ್ಲಿ ನಡೆಯಲಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶ್ರಾವಣಿ ಮೈಸೂರಿನಿಂದ ರೈಲಿನ ಮೂಲಕ ಹರಿಹರಕ್ಕೆ ಬಂದಿದ್ದರು.</p>.<p>ರೈಲು ನಿಲ್ದಾಣದಲ್ಲಿ ಇಳಿದಾಗ ಶ್ರಾವಣಿಯ ಅಜ್ಜ ಸತ್ಯನಾರಾಯಣರಾವ್ ಸಿಕ್ಕಿದ್ದರು. ಇಬ್ಬರೂ ನಿಲ್ದಾಣದಿಂದ ಹೊರಗೆ ಬರಲು ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ.</p>.<p>ಘಟನೆಯಿಂದಾಗಿ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಇಲ್ಲಿನ ತಾತನ ಮನೆಯಲ್ಲಿ ದುಃಖ ಮಡುಗಟ್ಟಿದೆ. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ನಗರದ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ರೈಲು ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಬಳ್ಳಾರಿಯ ಸತ್ಯವಾಣಿ ನಗರದ ನಿವಾಸಿ, ಮೈಸೂರಿನ ಜೆಎಸ್ಎಸ್ ಕಾಲೇಜಿನ 2ನೇ ವರ್ಷದ ಎಂಬಿಎ ವಿದ್ಯಾರ್ಥಿನಿ ಶ್ರಾವಣಿ (24) ಮೃತಪಟ್ಟವರು.</p>.<p>ಶ್ರಾವಣಿಯ ತಂದೆ ಬಾಬು ಎಸ್.ಜಿ. ಅವರ ಚಿಕ್ಕಪ್ಪ ಸತ್ಯನಾರಾಯಣರಾವ್ ಅವರು ಹರಿಹರದಲ್ಲಿ ವಾಸವಿದ್ದಾರೆ. ಅವರ ಮನೆಯಲ್ಲಿ ನಡೆಯಲಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶ್ರಾವಣಿ ಮೈಸೂರಿನಿಂದ ರೈಲಿನ ಮೂಲಕ ಹರಿಹರಕ್ಕೆ ಬಂದಿದ್ದರು.</p>.<p>ರೈಲು ನಿಲ್ದಾಣದಲ್ಲಿ ಇಳಿದಾಗ ಶ್ರಾವಣಿಯ ಅಜ್ಜ ಸತ್ಯನಾರಾಯಣರಾವ್ ಸಿಕ್ಕಿದ್ದರು. ಇಬ್ಬರೂ ನಿಲ್ದಾಣದಿಂದ ಹೊರಗೆ ಬರಲು ರೈಲ್ವೆ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ ಹೊಡೆದಿದೆ.</p>.<p>ಘಟನೆಯಿಂದಾಗಿ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಇಲ್ಲಿನ ತಾತನ ಮನೆಯಲ್ಲಿ ದುಃಖ ಮಡುಗಟ್ಟಿದೆ. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>