<p><strong>ಟಿ.ಗೋಪಗೊಂಡನಹಳ್ಳಿ (ನ್ಯಾಮತಿ):</strong> ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವು ಮಂಗಳವಾರ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿತ್ತು. </p>.<p>ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಹಣ್ಣು, ಹೂವು, ವಿವಿಧ ಕಾಳುಗಳನ್ನು ತಂದು ಶಾಲೆಯ ಆವರಣದಲ್ಲಿ ಮಾರಾಟ ಮಾಡುವ ಮೂಲಕ ಸಂತೆಯ ಪರಿಕಲ್ಪನೆಯೊಂದಿಗೆ ಸಂಭ್ರಮಿಸಿದರು. </p>.<p>ಸಂತೆಯಲ್ಲಿ ವ್ಯಾಪಾರಿಗಳು ಕೂಗುವ ಮಾದರಿಯಲ್ಲೇ ವಿದ್ಯಾರ್ಥಿಗಳು ಗ್ರಾಹಕರನ್ನು ಕೂಗಿ ಕರೆದರು. ಸಾರ್ವಜನಿಕರು, ಪೋಷಕರು, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ತರಕಾರಿ ಹಾಗೂ ಇನ್ನಿತರ ವಸ್ತುಗಳನ್ನು ಖರೀದಿಸಿದರು. </p>.<p>‘ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಜೊತೆಗೆ ಗಣಿತ ಕಲಿಕೆಗೆ ಸಹಕಾರಿಯಾಗಲೆಂದು ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು’ ಎಂದು ಶಾಲೆಯ ಮುಖ್ಯಶಿಕ್ಷಕ ಎಚ್.ರವಿಕುಮಾರ ತಿಳಿಸಿದರು. </p>.<p>ಎಸ್ಡಿಎಂಸಿ ಅಧ್ಯಕ್ಷ ಪರಶುರಾಮಪ್ಪ, ಸದಸ್ಯರು, ಚೀಲೂರು ತರಕಾರಿ ವ್ಯಾಪಾರಿ ಅಮ್ಜದ್ಬೇಗ್, ಸಹಶಿಕ್ಷಕರಾದ ಕವಿತಾ, ಸುನಿತಾ, ಷಣ್ಮುಖ, ಶಿಲ್ಪಾ, ತೇಜಸ್ವಿನಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟಿ.ಗೋಪಗೊಂಡನಹಳ್ಳಿ (ನ್ಯಾಮತಿ):</strong> ತಾಲ್ಲೂಕಿನ ಟಿ.ಗೋಪಗೊಂಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವು ಮಂಗಳವಾರ ತರಕಾರಿ ಮಾರುಕಟ್ಟೆಯಾಗಿ ಪರಿವರ್ತನೆಗೊಂಡಿತ್ತು. </p>.<p>ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಹಣ್ಣು, ಹೂವು, ವಿವಿಧ ಕಾಳುಗಳನ್ನು ತಂದು ಶಾಲೆಯ ಆವರಣದಲ್ಲಿ ಮಾರಾಟ ಮಾಡುವ ಮೂಲಕ ಸಂತೆಯ ಪರಿಕಲ್ಪನೆಯೊಂದಿಗೆ ಸಂಭ್ರಮಿಸಿದರು. </p>.<p>ಸಂತೆಯಲ್ಲಿ ವ್ಯಾಪಾರಿಗಳು ಕೂಗುವ ಮಾದರಿಯಲ್ಲೇ ವಿದ್ಯಾರ್ಥಿಗಳು ಗ್ರಾಹಕರನ್ನು ಕೂಗಿ ಕರೆದರು. ಸಾರ್ವಜನಿಕರು, ಪೋಷಕರು, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಬಳಿ ತರಕಾರಿ ಹಾಗೂ ಇನ್ನಿತರ ವಸ್ತುಗಳನ್ನು ಖರೀದಿಸಿದರು. </p>.<p>‘ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನದ ಜೊತೆಗೆ ಗಣಿತ ಕಲಿಕೆಗೆ ಸಹಕಾರಿಯಾಗಲೆಂದು ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು’ ಎಂದು ಶಾಲೆಯ ಮುಖ್ಯಶಿಕ್ಷಕ ಎಚ್.ರವಿಕುಮಾರ ತಿಳಿಸಿದರು. </p>.<p>ಎಸ್ಡಿಎಂಸಿ ಅಧ್ಯಕ್ಷ ಪರಶುರಾಮಪ್ಪ, ಸದಸ್ಯರು, ಚೀಲೂರು ತರಕಾರಿ ವ್ಯಾಪಾರಿ ಅಮ್ಜದ್ಬೇಗ್, ಸಹಶಿಕ್ಷಕರಾದ ಕವಿತಾ, ಸುನಿತಾ, ಷಣ್ಮುಖ, ಶಿಲ್ಪಾ, ತೇಜಸ್ವಿನಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>