ಬುಧವಾರ ಈ ಕಾಲೇಜಿನ ವಿದ್ಯಾರ್ಥಿಗಳ ಗಂಟಲಿನ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಗುರುವಾರ ರಾತ್ರಿ ವರದಿ ಲಭಿಸಿದ್ದು, 15 ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ದೃಡಪಟ್ಟಿದೆ. ತಹಶೀಲ್ದಾರ್ ರಾಮಚಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಡಿ.ಜಿ. ರಾಘವನ್, ಡಾ. ನಟರಾಜ್, ಮುಖ್ಯಾಧಿಕಾರಿ ರುಕ್ಮಿಣಿ, ಉಪ ತಹಶೀಲ್ದಾರ್ ರವಿ ಅವರು ಶುಕ್ರವಾರ ಕಾಲೇಜಿಗೆ ತೆರಳಿ ಪರಿಶೀಲಿಸಿದರು.