ಮಂಗಳವಾರ ಸಂಜೆ ಸ್ಥಳಕ್ಕೆ ಬಂದ ಕಂಪೆನಿಯ ಮ್ಯಾನೇಜರ್ ಬಾಕಿ ಹಣ ನೀಡಲಾಗುವುದಿಲ್ಲ ಎಂದು ಹೇಳಿದರು. ಇದರಿಂದ ಬೇಸತ್ತ ಶ್ರೀನಿವಾಸ್ ವಿಷ ಕುಡಿದು ಅಸ್ವಸ್ಥಗೊಂಡರು. ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಾದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.