ತುಂಗಭದ್ರಾ ನದಿ ಪಾತ್ರದ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲ ದಿನಗಳಿಂದ ಸುರಿದ ನಿರಂತರ ಮಳೆಯಿಂದ 60-70 ಮುಸಿಯಾಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಬಂದು ರಾಜನಹಳ್ಳಿ ಗ್ರಾಮದ ಬಳಿಯ ನದಿಯ ಮರದಲ್ಲಿ ಸಿಲುಕಿಕೊಂಡಿದ್ದವು. ನಾಲ್ಕು ದಿನಗಳ ಕಾಲ ಆಹಾರವಿಲ್ಲದೇ ನರಳಿದ್ದವು. ಅವುಗಳ ರಕ್ಷಣೆಗಾಗಿ ಅರಣ್ಯ ಇಲಾಖೆ, ಅಗ್ನಿಶಾಮಕದಳ, ಪೊಲೀಸರು, ಮೀನುಗಾರರು ಹಾಗೂ ಸ್ಥಳೀಯ ನಿವಾಸಿಗಳು ಕಾರ್ಯಾಚರಣೆ ನಡೆಸಿದ್ದರು.