ಆದರೆ, ಈ ಹಿಂದಿನ ಎರಡು ಸಭೆಗಳಲ್ಲೂ ‘ಕೆಲಸ ಕೊಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿದ ಪ್ರಸಂಗ ನಡೆದಿತ್ತು. ‘ಹೇಡಿಗಳಾಗಬೇಡಿ, ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ’ ಎಂದು ಜಿಲ್ಲಾಧಿಕಾರಿ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಈ ಬಾರಿಯೂ ಇದು ಪುನರಾವರ್ತನೆಯಾಗಿದ್ದರಿಂದ ತಾಳ್ಮೆ ಕಳೆದುಕೊಂಡ ಜಿಲ್ಲಾಧಿಕಾರಿ, ಕೆಲಸ ಕೇಳಿಕೊಂಡು ಬಂದ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡರು.